ಸರ, ದೇವಸ್ಥಾನ ಹುಂಡಿ, ಇಂಟರ್ನೆಟ್ ಕೇಬಲ್, ಹಸು, ಕುರಿ, ಮೇಕೆ ಕಳ್ಳತನ ಆಯ್ತು ಈಗ ಬೈಕ್ ರಾಬರಿಗಿಳಿದ ಖದೀಮರು: ಹಾಡಹಗಲೇ ಬೆಲೆ ಬಾಳುವ ಬೈಕ್‌ ಗಳ ಕಳ್ಳತನ

ತಾಲೂಕಿನಲ್ಲಿ ಪದೇ ಪದೇ ಮರುಕಳಿಸುತ್ತಿರುವ ಕಳ್ಳತನ ಪ್ರಕರಣಗಳು. ಒಂಟಿ ಮಹಿಳೆಯರ ಸರಗಳ್ಳತನ, ದೇವಸ್ಥಾನ‌ ಹುಂಡಿಗಳ ಕಳವು, ಕುರಿ, ಮೇಕೆ, ಹಸು ಕಳ್ಳತನ, ಇಂಟರ್ನೆಟ್ ಕೇಬಲ್‌ ಹೀಗೆ ಬೆಲೆ ಬಾಳುವ ವಸ್ತು, ಪ್ರಾಣಿಗಳನ್ನು ಕಳ್ಳತನ ಮಾಡುತ್ತಿರೋ ಖದೀಮರು.

ಮೇ.20ರಂದು ಮಟ ಮಟ ಮಧ್ಯಾಹ್ನ ಸುಮಾರು 2:30ರ ಸಮಯದಲ್ಲಿ ತಾಲೂಕು ಕಚೇರಿ ಎದುರು ಪಾರ್ಕ್ ಮಾಡಿದ್ದ ಸುಮಾರು 40 ಸಾವಿರ ಬೆಲೆ ಬಾಳುವ ಮೋಟಾರ್ ಸೈಕಲ್ ನ್ನು ಎಸ್ಕೇಪ್ ಮಾಡಿರೋ ಕಳ್ಳರು. ತಾಲೂಕು ಕಚೇರಿಯಲ್ಲಿ ಅಸಿಸ್ಟೆಂಟ್ ಆಗಿ ಕೆಲಸ ಮಾಡುವ ವ್ಯಕ್ತಿಯು ಎಂದಿನಂತೆ ತನ್ನ ಬೈಕ್‌ ನಿಲ್ಲಿಸಿ ಕೆಲಸಕ್ಕೆ ಕಚೇರಿ ಒಳಗೆ ಹೋಗಿದ್ದಾರೆ. ಬೈಕ್ ನಿಲ್ಲಿಸಿ ಕೆಲ ಹೊತ್ತಾದ ಮೇಲೆ ಬಂದು ನೋಡಿದಾಗ ಬೈಕ್ ನಾಪತ್ತೆ, ಎಷ್ಟು ಹುಡುಕಿದರೂ ಬೈಕ್ ಸಿಗದ ಕಾರಣ ಜೂನ್.2ರಂದು ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮೇಲೆ ತಿಳಿಸಿದ ಘಟನೆ ಮಾಸುವ ಮೊದಲೇ ಇನ್ನೊಂದು ಬೈಕ್ ನಾಪತ್ತೆ. ಈ ಘಟನೆಯೂ ಸಹ ಮೇ.29ರ ಮಧ್ಯಾಹ್ನ 2:40ರ ಸಮಯದಲ್ಲಿ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಲು ನಗರದ ಬಸ್ ನಿಲ್ದಾಣ ಬಳಿಯ ಬೇಕರಿಯೊಂದರ ಖಾಲಿ ಜಾಗದಲ್ಲಿ ಬೈಕ್ ನಿಲ್ಲಿಸಿ ಬಸ್ ಹತ್ತಿ ಹೋದ ಬೈಕ್ ಮಾಲೀಕ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಳ್ಳರು ಬೈಕ್ ಮಾಲೀಕ ಬರುವಷ್ಟರಲ್ಲಿ ಸ್ಥಳದಿಂದ ಬೈಕ್ ಎಗರಿಸಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳು ತಡವಾಗಿ ಬೆಳಕಿಗೆ ಬಂದಿದೆ.

ಹೀಗೆ ನಗರ ಹಾಗೂ ಗ್ರಾಮೀಣದಲ್ಲಿ ಕಳ್ಳರ ಕೈಚಳಕದ ಬಿಸಿ ವಸ್ತುಗಳನ್ನು ಕಳೆದುಕೊಂಡವರಿಗೆ ತಟ್ಟುತ್ತಿದೆ. ಸಾರ್ವಜನಿಕರ ನಿದ್ದೆಗೆಡಿಸುತ್ತಿರುವ ಪದೇ ಪದೇ ಮರುಕಳಿಸುತ್ತಿರುವ ಕಳ್ಳತನ ಪ್ರಕರಣಗಳು. ಜನ ಸಮಾನ್ಯರು ನೆಮ್ಮದಿ ಜೀವನ ನಡೆಸಲು ಕಳ್ಳರ ಅಟ್ಟಹಾಸವನ್ನು ಪೋಲಿಸ್ ಇಲಾಖೆ ತಡೆಯಬೇಕು. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಆಗ ಕಳ್ಳರ ಸದ್ದು ಅಡಗಿಸಬಹುದು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

8 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

8 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

16 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago