ಸರ, ದೇವಸ್ಥಾನ ಹುಂಡಿ, ಇಂಟರ್ನೆಟ್ ಕೇಬಲ್, ಹಸು, ಕುರಿ, ಮೇಕೆ ಕಳ್ಳತನ ಆಯ್ತು ಈಗ ಬೈಕ್ ರಾಬರಿಗಿಳಿದ ಖದೀಮರು: ಹಾಡಹಗಲೇ ಬೆಲೆ ಬಾಳುವ ಬೈಕ್‌ ಗಳ ಕಳ್ಳತನ

ತಾಲೂಕಿನಲ್ಲಿ ಪದೇ ಪದೇ ಮರುಕಳಿಸುತ್ತಿರುವ ಕಳ್ಳತನ ಪ್ರಕರಣಗಳು. ಒಂಟಿ ಮಹಿಳೆಯರ ಸರಗಳ್ಳತನ, ದೇವಸ್ಥಾನ‌ ಹುಂಡಿಗಳ ಕಳವು, ಕುರಿ, ಮೇಕೆ, ಹಸು ಕಳ್ಳತನ, ಇಂಟರ್ನೆಟ್ ಕೇಬಲ್‌ ಹೀಗೆ ಬೆಲೆ ಬಾಳುವ ವಸ್ತು, ಪ್ರಾಣಿಗಳನ್ನು ಕಳ್ಳತನ ಮಾಡುತ್ತಿರೋ ಖದೀಮರು.

ಮೇ.20ರಂದು ಮಟ ಮಟ ಮಧ್ಯಾಹ್ನ ಸುಮಾರು 2:30ರ ಸಮಯದಲ್ಲಿ ತಾಲೂಕು ಕಚೇರಿ ಎದುರು ಪಾರ್ಕ್ ಮಾಡಿದ್ದ ಸುಮಾರು 40 ಸಾವಿರ ಬೆಲೆ ಬಾಳುವ ಮೋಟಾರ್ ಸೈಕಲ್ ನ್ನು ಎಸ್ಕೇಪ್ ಮಾಡಿರೋ ಕಳ್ಳರು. ತಾಲೂಕು ಕಚೇರಿಯಲ್ಲಿ ಅಸಿಸ್ಟೆಂಟ್ ಆಗಿ ಕೆಲಸ ಮಾಡುವ ವ್ಯಕ್ತಿಯು ಎಂದಿನಂತೆ ತನ್ನ ಬೈಕ್‌ ನಿಲ್ಲಿಸಿ ಕೆಲಸಕ್ಕೆ ಕಚೇರಿ ಒಳಗೆ ಹೋಗಿದ್ದಾರೆ. ಬೈಕ್ ನಿಲ್ಲಿಸಿ ಕೆಲ ಹೊತ್ತಾದ ಮೇಲೆ ಬಂದು ನೋಡಿದಾಗ ಬೈಕ್ ನಾಪತ್ತೆ, ಎಷ್ಟು ಹುಡುಕಿದರೂ ಬೈಕ್ ಸಿಗದ ಕಾರಣ ಜೂನ್.2ರಂದು ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮೇಲೆ ತಿಳಿಸಿದ ಘಟನೆ ಮಾಸುವ ಮೊದಲೇ ಇನ್ನೊಂದು ಬೈಕ್ ನಾಪತ್ತೆ. ಈ ಘಟನೆಯೂ ಸಹ ಮೇ.29ರ ಮಧ್ಯಾಹ್ನ 2:40ರ ಸಮಯದಲ್ಲಿ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಲು ನಗರದ ಬಸ್ ನಿಲ್ದಾಣ ಬಳಿಯ ಬೇಕರಿಯೊಂದರ ಖಾಲಿ ಜಾಗದಲ್ಲಿ ಬೈಕ್ ನಿಲ್ಲಿಸಿ ಬಸ್ ಹತ್ತಿ ಹೋದ ಬೈಕ್ ಮಾಲೀಕ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಳ್ಳರು ಬೈಕ್ ಮಾಲೀಕ ಬರುವಷ್ಟರಲ್ಲಿ ಸ್ಥಳದಿಂದ ಬೈಕ್ ಎಗರಿಸಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳು ತಡವಾಗಿ ಬೆಳಕಿಗೆ ಬಂದಿದೆ.

ಹೀಗೆ ನಗರ ಹಾಗೂ ಗ್ರಾಮೀಣದಲ್ಲಿ ಕಳ್ಳರ ಕೈಚಳಕದ ಬಿಸಿ ವಸ್ತುಗಳನ್ನು ಕಳೆದುಕೊಂಡವರಿಗೆ ತಟ್ಟುತ್ತಿದೆ. ಸಾರ್ವಜನಿಕರ ನಿದ್ದೆಗೆಡಿಸುತ್ತಿರುವ ಪದೇ ಪದೇ ಮರುಕಳಿಸುತ್ತಿರುವ ಕಳ್ಳತನ ಪ್ರಕರಣಗಳು. ಜನ ಸಮಾನ್ಯರು ನೆಮ್ಮದಿ ಜೀವನ ನಡೆಸಲು ಕಳ್ಳರ ಅಟ್ಟಹಾಸವನ್ನು ಪೋಲಿಸ್ ಇಲಾಖೆ ತಡೆಯಬೇಕು. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಆಗ ಕಳ್ಳರ ಸದ್ದು ಅಡಗಿಸಬಹುದು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago