ಸರ, ದೇವಸ್ಥಾನ ಹುಂಡಿ, ಇಂಟರ್ನೆಟ್ ಕೇಬಲ್, ಹಸು, ಕುರಿ, ಮೇಕೆ ಕಳ್ಳತನ ಆಯ್ತು ಈಗ ಬೈಕ್ ರಾಬರಿಗಿಳಿದ ಖದೀಮರು: ಹಾಡಹಗಲೇ ಬೆಲೆ ಬಾಳುವ ಬೈಕ್‌ ಗಳ ಕಳ್ಳತನ

ತಾಲೂಕಿನಲ್ಲಿ ಪದೇ ಪದೇ ಮರುಕಳಿಸುತ್ತಿರುವ ಕಳ್ಳತನ ಪ್ರಕರಣಗಳು. ಒಂಟಿ ಮಹಿಳೆಯರ ಸರಗಳ್ಳತನ, ದೇವಸ್ಥಾನ‌ ಹುಂಡಿಗಳ ಕಳವು, ಕುರಿ, ಮೇಕೆ, ಹಸು ಕಳ್ಳತನ, ಇಂಟರ್ನೆಟ್ ಕೇಬಲ್‌ ಹೀಗೆ ಬೆಲೆ ಬಾಳುವ ವಸ್ತು, ಪ್ರಾಣಿಗಳನ್ನು ಕಳ್ಳತನ ಮಾಡುತ್ತಿರೋ ಖದೀಮರು.

ಮೇ.20ರಂದು ಮಟ ಮಟ ಮಧ್ಯಾಹ್ನ ಸುಮಾರು 2:30ರ ಸಮಯದಲ್ಲಿ ತಾಲೂಕು ಕಚೇರಿ ಎದುರು ಪಾರ್ಕ್ ಮಾಡಿದ್ದ ಸುಮಾರು 40 ಸಾವಿರ ಬೆಲೆ ಬಾಳುವ ಮೋಟಾರ್ ಸೈಕಲ್ ನ್ನು ಎಸ್ಕೇಪ್ ಮಾಡಿರೋ ಕಳ್ಳರು. ತಾಲೂಕು ಕಚೇರಿಯಲ್ಲಿ ಅಸಿಸ್ಟೆಂಟ್ ಆಗಿ ಕೆಲಸ ಮಾಡುವ ವ್ಯಕ್ತಿಯು ಎಂದಿನಂತೆ ತನ್ನ ಬೈಕ್‌ ನಿಲ್ಲಿಸಿ ಕೆಲಸಕ್ಕೆ ಕಚೇರಿ ಒಳಗೆ ಹೋಗಿದ್ದಾರೆ. ಬೈಕ್ ನಿಲ್ಲಿಸಿ ಕೆಲ ಹೊತ್ತಾದ ಮೇಲೆ ಬಂದು ನೋಡಿದಾಗ ಬೈಕ್ ನಾಪತ್ತೆ, ಎಷ್ಟು ಹುಡುಕಿದರೂ ಬೈಕ್ ಸಿಗದ ಕಾರಣ ಜೂನ್.2ರಂದು ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮೇಲೆ ತಿಳಿಸಿದ ಘಟನೆ ಮಾಸುವ ಮೊದಲೇ ಇನ್ನೊಂದು ಬೈಕ್ ನಾಪತ್ತೆ. ಈ ಘಟನೆಯೂ ಸಹ ಮೇ.29ರ ಮಧ್ಯಾಹ್ನ 2:40ರ ಸಮಯದಲ್ಲಿ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಲು ನಗರದ ಬಸ್ ನಿಲ್ದಾಣ ಬಳಿಯ ಬೇಕರಿಯೊಂದರ ಖಾಲಿ ಜಾಗದಲ್ಲಿ ಬೈಕ್ ನಿಲ್ಲಿಸಿ ಬಸ್ ಹತ್ತಿ ಹೋದ ಬೈಕ್ ಮಾಲೀಕ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಳ್ಳರು ಬೈಕ್ ಮಾಲೀಕ ಬರುವಷ್ಟರಲ್ಲಿ ಸ್ಥಳದಿಂದ ಬೈಕ್ ಎಗರಿಸಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳು ತಡವಾಗಿ ಬೆಳಕಿಗೆ ಬಂದಿದೆ.

ಹೀಗೆ ನಗರ ಹಾಗೂ ಗ್ರಾಮೀಣದಲ್ಲಿ ಕಳ್ಳರ ಕೈಚಳಕದ ಬಿಸಿ ವಸ್ತುಗಳನ್ನು ಕಳೆದುಕೊಂಡವರಿಗೆ ತಟ್ಟುತ್ತಿದೆ. ಸಾರ್ವಜನಿಕರ ನಿದ್ದೆಗೆಡಿಸುತ್ತಿರುವ ಪದೇ ಪದೇ ಮರುಕಳಿಸುತ್ತಿರುವ ಕಳ್ಳತನ ಪ್ರಕರಣಗಳು. ಜನ ಸಮಾನ್ಯರು ನೆಮ್ಮದಿ ಜೀವನ ನಡೆಸಲು ಕಳ್ಳರ ಅಟ್ಟಹಾಸವನ್ನು ಪೋಲಿಸ್ ಇಲಾಖೆ ತಡೆಯಬೇಕು. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಆಗ ಕಳ್ಳರ ಸದ್ದು ಅಡಗಿಸಬಹುದು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

9 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

20 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

21 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

24 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago