ಸರ ಹಾಗೂ ಮನೆ ಕಳ್ಳರ ಬಂಧನ: ಬಂಧಿತರಿಂದ 143 ಗ್ರಾಂ ಚಿನ್ನಾಭರಣ ವಶ

ಗೌರಿಬಿದನೂರು ನಗರ ಹಾಗೂ ಗ್ರಾಮಾಂತರದಲ್ಲಿ ಸರಗಳ್ಳತನ ಹಾಗೂ ಮನೆಗಳ್ಳತನ ಮಾಡಿದ್ದಂತಹ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಅಬ್ಬಾಸ್ ಮುನೀರ್ ಇರಾನಿ, ಅಬ್ಬಾಸ್ ಜಾಜ್ ಇರಾನಿ, ಜಾವೀದ್ ಜಹಾಂಗೀರ್ ಇರಾನಿ, ಗೌರಿಬಿದನೂರು ತಾಲೂಕಿನ ಹಿರೇಬಿದನೂರು ಗ್ರಾಮದ ಮೆಹಬೂಬ್ ಬಾಷಾ ಎಂದು ತಿಳಿದು ಬಂದಿದೆ. ಇನ್ನೂ ಬಂಧಿತರಿಂದ 143 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ವಿವಿಧ ಸ್ಥಳಗಳಲ್ಲಿ ಕಳ್ಳತನ ಮಾಡಿಕೊಂಡು ನಾಲ್ಕು ಜನ ಆರೋಪಿಗಳು ಎಸ್ಕೇಪ್ ಆಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ಪ್ರತ್ಯೇಕವಾಗಿ ದೂರು ದಾಖಲಾಗಿದ್ದು, ಇನ್ನೂ ಸರಗಳ್ಳತನ ಹಾಗೂ ಮನೆಗಳ್ಳತನ ಪ್ರಕರಣದಲ್ಲಿ ದೂರು ದಾಖಲಿಸಿಕೊಂಡ ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿ ತನಿಖೆಯನ್ನು ಶುರು ಮಾಡಿದ್ದರು.
ಇನ್ನೂ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಖಚಿತ ಮಾಹಿತಿ ಮೇರೆಗೆ ಗೌರಿಬಿದನೂರು ತಾಲೂಕಿನ ಹೀರೆಬಿದನೂರು ಗ್ರಾಮದ ನಿವಾಸಿ ಮೆಹಬೂಬ್ ಪಾಷಾ ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಇರಾನಿ ಗ್ಯಾಂಗ್ ಕಳ್ಳತನದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. ಅದರಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದು ಸರಗಳ್ಳತನ ಹಾಗೂ ಮನೆಗಳ್ಳತನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

8 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

9 hours ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

11 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

14 hours ago

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

20 hours ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

2 days ago