ಬೆಂ.ಗ್ರಾ.ಜಿಲ್ಲೆ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಇಂದು (ಜ.28) ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ರವರೆಗೆ ಲಿಖಿತ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜಾಲಪ್ಪ ಕಾಲೇಜಿನಲ್ಲಿ ಎರಡು ಕೇಂದ್ರ, ರಾಜಾನುಕುಂಟೆ ಸಮೀಪದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಒಂದು ಹಾಗೂ ಯಲಹಂಕದ ಬಿಎಂಎಸ್ ಕಾಲೇಜಿನ ಒಂದು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.
ಜಿಲ್ಲೆಯಲ್ಲಿ ಒಟ್ಟು 5000 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಲಿಖಿತ ಪರೀಕ್ಷೆಗೆ ಹಾಜಾರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ರವಿ.ಪಿ ಅವರು ಸೂಚಿಸಿದ್ದಾರೆ.
ಪುರುಷ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಧ ತೋಳಿನ, ಕಾಲರ್ ರಹಿತ ಶರ್ಟ್ ಧರಿಸುವುದು. ಚಿಕ್ಕ ಪಾಕೇಟ್ಗಳು, ದೊಡ್ಡ ಬಟನ್ಗಳು ಇರುವ ಶರ್ಟ್ಗಳನ್ನು ಧರಿಸತಕ್ಕದ್ದಲ್ಲ, ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ ಧರಿಸಕೂಡದು.
ಪರೀಕ್ಷಾ ಕೇಂದ್ರಗಳಲ್ಲಿ ಶೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆ ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು, ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…