ಸಹಕಾರಿ ಸಂಘಗಳು ಗ್ರಾಮೀಣ ಜನರ ಉಸಿರು: ಶಾಸಕ ಧೀರಜ್‌ ಮುನಿರಾಜ್

ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ಧಾರಿ ಹೊರಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ಎಸ್.ಎಂ ಗೊಲ್ಲಹಳ್ಳಿ
ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಹಕಾರ
ಸಂಘದ ಮೊದಲ ಅಂತಸ್ತಿನ ನೂತನ ಕಟ್ಟಡ ಹಾಗೂ ಪೀಠೋಪಕರಣಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸರ್ಕಾರಕ್ಕೆ ಸರಿಸಮನಾಗಿ ಸಹಕಾರಿ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಡಿಸಿಸಿ ಬ್ಯಾಂಕ್, ಪಿಎಲ್‌ಡಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘಗಳು ಜನರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುತ್ತಿವೆ. ನನ್ನ ಅವಧಿಯಲ್ಲಿಯೂ ಅಗತ್ಯವಿರುವ ಎಂಪಿಸಿಎಸ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರೈತರಿಗೆ ಸಹಕಾರ ನೀಡಲಾಗುತ್ತದೆ ಎಂದರು.

ನಂತರ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ಆದಾಯದ ಮೂಲವಾಗಿದ್ದು, ಯುವಜನತೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಹೈನುಗಾರರು ಸಂಕಷ್ಟದಲ್ಲಿದ್ದಾರೆ. ಪಶು ಆಹಾರದ ದರ ಇಳಿಕೆಗೆ ಅಗತ್ಯ ಕ್ರಮವನ್ನು ಸರ್ಕಾರ ವಹಿಸಬೇಕು. ಇಂದಿನ ಯುವ ಜನಾಂಗ ಹೈನುಗಾರಿಕೆಯಿಂದ ದೂರವಾಗುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.

ಈ ವೇಳೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್, ಅರಳು ಮಲ್ಲಿಗೆ ಗ್ರಾ.ಪಂ ಅಧ್ಯಕ್ಷ ವೆಂಕಟೇಶ್, ಎಂಪಿಸಿಎಸ್ ನೌಕರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್, ಒಕ್ಕೂಟ ಉಪ ವ್ಯವಸ್ಥಾಪಕ ಎಲ್ ಬಿ ನಾಗರಾಜು, ಮುನಿರಾಜೇಗೌಡ, ಗೊಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಕೆ. ಹನುಮಂತರಾಯಪ್ಪ, ಉಪಾಧ್ಯಕ್ಷ ಶಿವಣ್ಣ, ಎಂಪಿಸಿಎಸ್ ನಿರ್ದೇಶಕ ಮಲ್ಲೇಶ್, ವೀರಕೆಂಪಣ್ಣ, ಡೇರಿ ಮುಖ್ಯಕಾರ್ಯನಿರ್ವಹಾಕ ಕೆಂಪಣ್ಣ, ಗ್ರಾ.ಪಂ ಸದಸ್ಯರು
ಮತ್ತಿತರರು ಇದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

55 minutes ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

2 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

6 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

8 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

11 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

12 hours ago