ಸಹಕಾರಿ ಸಂಘಗಳು ಗ್ರಾಮೀಣ ಜನರ ಉಸಿರು: ಶಾಸಕ ಧೀರಜ್‌ ಮುನಿರಾಜ್

ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ಧಾರಿ ಹೊರಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ಎಸ್.ಎಂ ಗೊಲ್ಲಹಳ್ಳಿ
ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಹಕಾರ
ಸಂಘದ ಮೊದಲ ಅಂತಸ್ತಿನ ನೂತನ ಕಟ್ಟಡ ಹಾಗೂ ಪೀಠೋಪಕರಣಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸರ್ಕಾರಕ್ಕೆ ಸರಿಸಮನಾಗಿ ಸಹಕಾರಿ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಡಿಸಿಸಿ ಬ್ಯಾಂಕ್, ಪಿಎಲ್‌ಡಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘಗಳು ಜನರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುತ್ತಿವೆ. ನನ್ನ ಅವಧಿಯಲ್ಲಿಯೂ ಅಗತ್ಯವಿರುವ ಎಂಪಿಸಿಎಸ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರೈತರಿಗೆ ಸಹಕಾರ ನೀಡಲಾಗುತ್ತದೆ ಎಂದರು.

ನಂತರ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ಆದಾಯದ ಮೂಲವಾಗಿದ್ದು, ಯುವಜನತೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಹೈನುಗಾರರು ಸಂಕಷ್ಟದಲ್ಲಿದ್ದಾರೆ. ಪಶು ಆಹಾರದ ದರ ಇಳಿಕೆಗೆ ಅಗತ್ಯ ಕ್ರಮವನ್ನು ಸರ್ಕಾರ ವಹಿಸಬೇಕು. ಇಂದಿನ ಯುವ ಜನಾಂಗ ಹೈನುಗಾರಿಕೆಯಿಂದ ದೂರವಾಗುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.

ಈ ವೇಳೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್, ಅರಳು ಮಲ್ಲಿಗೆ ಗ್ರಾ.ಪಂ ಅಧ್ಯಕ್ಷ ವೆಂಕಟೇಶ್, ಎಂಪಿಸಿಎಸ್ ನೌಕರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್, ಒಕ್ಕೂಟ ಉಪ ವ್ಯವಸ್ಥಾಪಕ ಎಲ್ ಬಿ ನಾಗರಾಜು, ಮುನಿರಾಜೇಗೌಡ, ಗೊಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಕೆ. ಹನುಮಂತರಾಯಪ್ಪ, ಉಪಾಧ್ಯಕ್ಷ ಶಿವಣ್ಣ, ಎಂಪಿಸಿಎಸ್ ನಿರ್ದೇಶಕ ಮಲ್ಲೇಶ್, ವೀರಕೆಂಪಣ್ಣ, ಡೇರಿ ಮುಖ್ಯಕಾರ್ಯನಿರ್ವಹಾಕ ಕೆಂಪಣ್ಣ, ಗ್ರಾ.ಪಂ ಸದಸ್ಯರು
ಮತ್ತಿತರರು ಇದ್ದರು.

Ramesh Babu

Journalist

Share
Published by
Ramesh Babu

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

7 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

21 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

22 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

23 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

1 day ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago