ಸಹಕಾರಿ ಸಂಘಗಳು ಗ್ರಾಮೀಣ ಜನರ ಉಸಿರು: ಶಾಸಕ ಧೀರಜ್‌ ಮುನಿರಾಜ್

ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ಧಾರಿ ಹೊರಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ಎಸ್.ಎಂ ಗೊಲ್ಲಹಳ್ಳಿ
ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಹಕಾರ
ಸಂಘದ ಮೊದಲ ಅಂತಸ್ತಿನ ನೂತನ ಕಟ್ಟಡ ಹಾಗೂ ಪೀಠೋಪಕರಣಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸರ್ಕಾರಕ್ಕೆ ಸರಿಸಮನಾಗಿ ಸಹಕಾರಿ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಡಿಸಿಸಿ ಬ್ಯಾಂಕ್, ಪಿಎಲ್‌ಡಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘಗಳು ಜನರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುತ್ತಿವೆ. ನನ್ನ ಅವಧಿಯಲ್ಲಿಯೂ ಅಗತ್ಯವಿರುವ ಎಂಪಿಸಿಎಸ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರೈತರಿಗೆ ಸಹಕಾರ ನೀಡಲಾಗುತ್ತದೆ ಎಂದರು.

ನಂತರ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ಆದಾಯದ ಮೂಲವಾಗಿದ್ದು, ಯುವಜನತೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಹೈನುಗಾರರು ಸಂಕಷ್ಟದಲ್ಲಿದ್ದಾರೆ. ಪಶು ಆಹಾರದ ದರ ಇಳಿಕೆಗೆ ಅಗತ್ಯ ಕ್ರಮವನ್ನು ಸರ್ಕಾರ ವಹಿಸಬೇಕು. ಇಂದಿನ ಯುವ ಜನಾಂಗ ಹೈನುಗಾರಿಕೆಯಿಂದ ದೂರವಾಗುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.

ಈ ವೇಳೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್, ಅರಳು ಮಲ್ಲಿಗೆ ಗ್ರಾ.ಪಂ ಅಧ್ಯಕ್ಷ ವೆಂಕಟೇಶ್, ಎಂಪಿಸಿಎಸ್ ನೌಕರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್, ಒಕ್ಕೂಟ ಉಪ ವ್ಯವಸ್ಥಾಪಕ ಎಲ್ ಬಿ ನಾಗರಾಜು, ಮುನಿರಾಜೇಗೌಡ, ಗೊಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಕೆ. ಹನುಮಂತರಾಯಪ್ಪ, ಉಪಾಧ್ಯಕ್ಷ ಶಿವಣ್ಣ, ಎಂಪಿಸಿಎಸ್ ನಿರ್ದೇಶಕ ಮಲ್ಲೇಶ್, ವೀರಕೆಂಪಣ್ಣ, ಡೇರಿ ಮುಖ್ಯಕಾರ್ಯನಿರ್ವಹಾಕ ಕೆಂಪಣ್ಣ, ಗ್ರಾ.ಪಂ ಸದಸ್ಯರು
ಮತ್ತಿತರರು ಇದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

7 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

15 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

16 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago