ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ಧಾರಿ ಹೊರಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ತಾಲೂಕಿನ ಕಸಬಾ ಹೋಬಳಿಯ ಎಸ್.ಎಂ ಗೊಲ್ಲಹಳ್ಳಿ
ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಹಕಾರ
ಸಂಘದ ಮೊದಲ ಅಂತಸ್ತಿನ ನೂತನ ಕಟ್ಟಡ ಹಾಗೂ ಪೀಠೋಪಕರಣಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸರ್ಕಾರಕ್ಕೆ ಸರಿಸಮನಾಗಿ ಸಹಕಾರಿ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಡಿಸಿಸಿ ಬ್ಯಾಂಕ್, ಪಿಎಲ್ಡಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘಗಳು ಜನರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುತ್ತಿವೆ. ನನ್ನ ಅವಧಿಯಲ್ಲಿಯೂ ಅಗತ್ಯವಿರುವ ಎಂಪಿಸಿಎಸ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರೈತರಿಗೆ ಸಹಕಾರ ನೀಡಲಾಗುತ್ತದೆ ಎಂದರು.
ನಂತರ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ಆದಾಯದ ಮೂಲವಾಗಿದ್ದು, ಯುವಜನತೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಹೈನುಗಾರರು ಸಂಕಷ್ಟದಲ್ಲಿದ್ದಾರೆ. ಪಶು ಆಹಾರದ ದರ ಇಳಿಕೆಗೆ ಅಗತ್ಯ ಕ್ರಮವನ್ನು ಸರ್ಕಾರ ವಹಿಸಬೇಕು. ಇಂದಿನ ಯುವ ಜನಾಂಗ ಹೈನುಗಾರಿಕೆಯಿಂದ ದೂರವಾಗುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.
ಈ ವೇಳೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್, ಅರಳು ಮಲ್ಲಿಗೆ ಗ್ರಾ.ಪಂ ಅಧ್ಯಕ್ಷ ವೆಂಕಟೇಶ್, ಎಂಪಿಸಿಎಸ್ ನೌಕರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್, ಒಕ್ಕೂಟ ಉಪ ವ್ಯವಸ್ಥಾಪಕ ಎಲ್ ಬಿ ನಾಗರಾಜು, ಮುನಿರಾಜೇಗೌಡ, ಗೊಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಕೆ. ಹನುಮಂತರಾಯಪ್ಪ, ಉಪಾಧ್ಯಕ್ಷ ಶಿವಣ್ಣ, ಎಂಪಿಸಿಎಸ್ ನಿರ್ದೇಶಕ ಮಲ್ಲೇಶ್, ವೀರಕೆಂಪಣ್ಣ, ಡೇರಿ ಮುಖ್ಯಕಾರ್ಯನಿರ್ವಹಾಕ ಕೆಂಪಣ್ಣ, ಗ್ರಾ.ಪಂ ಸದಸ್ಯರು
ಮತ್ತಿತರರು ಇದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…