ಸಹಕಾರಿ ಸಂಘಗಳು ಗ್ರಾಮೀಣ ಜನರ ಉಸಿರು: ಶಾಸಕ ಧೀರಜ್‌ ಮುನಿರಾಜ್

ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ಧಾರಿ ಹೊರಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ಎಸ್.ಎಂ ಗೊಲ್ಲಹಳ್ಳಿ
ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಹಕಾರ
ಸಂಘದ ಮೊದಲ ಅಂತಸ್ತಿನ ನೂತನ ಕಟ್ಟಡ ಹಾಗೂ ಪೀಠೋಪಕರಣಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸರ್ಕಾರಕ್ಕೆ ಸರಿಸಮನಾಗಿ ಸಹಕಾರಿ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಡಿಸಿಸಿ ಬ್ಯಾಂಕ್, ಪಿಎಲ್‌ಡಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘಗಳು ಜನರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುತ್ತಿವೆ. ನನ್ನ ಅವಧಿಯಲ್ಲಿಯೂ ಅಗತ್ಯವಿರುವ ಎಂಪಿಸಿಎಸ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರೈತರಿಗೆ ಸಹಕಾರ ನೀಡಲಾಗುತ್ತದೆ ಎಂದರು.

ನಂತರ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ಆದಾಯದ ಮೂಲವಾಗಿದ್ದು, ಯುವಜನತೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಹೈನುಗಾರರು ಸಂಕಷ್ಟದಲ್ಲಿದ್ದಾರೆ. ಪಶು ಆಹಾರದ ದರ ಇಳಿಕೆಗೆ ಅಗತ್ಯ ಕ್ರಮವನ್ನು ಸರ್ಕಾರ ವಹಿಸಬೇಕು. ಇಂದಿನ ಯುವ ಜನಾಂಗ ಹೈನುಗಾರಿಕೆಯಿಂದ ದೂರವಾಗುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.

ಈ ವೇಳೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್, ಅರಳು ಮಲ್ಲಿಗೆ ಗ್ರಾ.ಪಂ ಅಧ್ಯಕ್ಷ ವೆಂಕಟೇಶ್, ಎಂಪಿಸಿಎಸ್ ನೌಕರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್, ಒಕ್ಕೂಟ ಉಪ ವ್ಯವಸ್ಥಾಪಕ ಎಲ್ ಬಿ ನಾಗರಾಜು, ಮುನಿರಾಜೇಗೌಡ, ಗೊಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಕೆ. ಹನುಮಂತರಾಯಪ್ಪ, ಉಪಾಧ್ಯಕ್ಷ ಶಿವಣ್ಣ, ಎಂಪಿಸಿಎಸ್ ನಿರ್ದೇಶಕ ಮಲ್ಲೇಶ್, ವೀರಕೆಂಪಣ್ಣ, ಡೇರಿ ಮುಖ್ಯಕಾರ್ಯನಿರ್ವಹಾಕ ಕೆಂಪಣ್ಣ, ಗ್ರಾ.ಪಂ ಸದಸ್ಯರು
ಮತ್ತಿತರರು ಇದ್ದರು.

Ramesh Babu

Journalist

Recent Posts

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

29 minutes ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

5 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago