ಸಹಕಾರಿ ಸಂಘಗಳು ಗ್ರಾಮೀಣ ಜನರ ಉಸಿರು: ಶಾಸಕ ಧೀರಜ್‌ ಮುನಿರಾಜ್

ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ಧಾರಿ ಹೊರಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ಎಸ್.ಎಂ ಗೊಲ್ಲಹಳ್ಳಿ
ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಹಕಾರ
ಸಂಘದ ಮೊದಲ ಅಂತಸ್ತಿನ ನೂತನ ಕಟ್ಟಡ ಹಾಗೂ ಪೀಠೋಪಕರಣಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸರ್ಕಾರಕ್ಕೆ ಸರಿಸಮನಾಗಿ ಸಹಕಾರಿ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಡಿಸಿಸಿ ಬ್ಯಾಂಕ್, ಪಿಎಲ್‌ಡಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘಗಳು ಜನರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುತ್ತಿವೆ. ನನ್ನ ಅವಧಿಯಲ್ಲಿಯೂ ಅಗತ್ಯವಿರುವ ಎಂಪಿಸಿಎಸ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರೈತರಿಗೆ ಸಹಕಾರ ನೀಡಲಾಗುತ್ತದೆ ಎಂದರು.

ನಂತರ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ಆದಾಯದ ಮೂಲವಾಗಿದ್ದು, ಯುವಜನತೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಹೈನುಗಾರರು ಸಂಕಷ್ಟದಲ್ಲಿದ್ದಾರೆ. ಪಶು ಆಹಾರದ ದರ ಇಳಿಕೆಗೆ ಅಗತ್ಯ ಕ್ರಮವನ್ನು ಸರ್ಕಾರ ವಹಿಸಬೇಕು. ಇಂದಿನ ಯುವ ಜನಾಂಗ ಹೈನುಗಾರಿಕೆಯಿಂದ ದೂರವಾಗುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.

ಈ ವೇಳೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್, ಅರಳು ಮಲ್ಲಿಗೆ ಗ್ರಾ.ಪಂ ಅಧ್ಯಕ್ಷ ವೆಂಕಟೇಶ್, ಎಂಪಿಸಿಎಸ್ ನೌಕರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್, ಒಕ್ಕೂಟ ಉಪ ವ್ಯವಸ್ಥಾಪಕ ಎಲ್ ಬಿ ನಾಗರಾಜು, ಮುನಿರಾಜೇಗೌಡ, ಗೊಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಕೆ. ಹನುಮಂತರಾಯಪ್ಪ, ಉಪಾಧ್ಯಕ್ಷ ಶಿವಣ್ಣ, ಎಂಪಿಸಿಎಸ್ ನಿರ್ದೇಶಕ ಮಲ್ಲೇಶ್, ವೀರಕೆಂಪಣ್ಣ, ಡೇರಿ ಮುಖ್ಯಕಾರ್ಯನಿರ್ವಹಾಕ ಕೆಂಪಣ್ಣ, ಗ್ರಾ.ಪಂ ಸದಸ್ಯರು
ಮತ್ತಿತರರು ಇದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

16 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago