ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ….

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:

• ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28,000 ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸಬೇಕು.

• ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.

• ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಂಘಗಳು ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು.

• ಕನ್ನಡ ಸಾಹಿತ್ಯ ಪರಿಷತ್‌‌ನ ಅವ್ಯವಹಾರಗಳ ಕುರಿತು ಡಿಆರ್‌ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು.

• ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಬೇಕು.

• ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

• ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು.

• ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

36 minutes ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

10 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

21 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

1 day ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

1 day ago