ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ….

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:

• ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28,000 ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸಬೇಕು.

• ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.

• ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಂಘಗಳು ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು.

• ಕನ್ನಡ ಸಾಹಿತ್ಯ ಪರಿಷತ್‌‌ನ ಅವ್ಯವಹಾರಗಳ ಕುರಿತು ಡಿಆರ್‌ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು.

• ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಬೇಕು.

• ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

• ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು.

• ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

15 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago