ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:
• ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28,000 ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸಬೇಕು.
• ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.
• ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಂಘಗಳು ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು.
• ಕನ್ನಡ ಸಾಹಿತ್ಯ ಪರಿಷತ್ನ ಅವ್ಯವಹಾರಗಳ ಕುರಿತು ಡಿಆರ್ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು.
• ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಬೇಕು.
• ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
• ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು.
• ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…