ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ….

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:

• ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28,000 ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸಬೇಕು.

• ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.

• ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಂಘಗಳು ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು.

• ಕನ್ನಡ ಸಾಹಿತ್ಯ ಪರಿಷತ್‌‌ನ ಅವ್ಯವಹಾರಗಳ ಕುರಿತು ಡಿಆರ್‌ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು.

• ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಬೇಕು.

• ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

• ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು.

• ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.

Ramesh Babu

Journalist

Recent Posts

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

1 hour ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

19 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

21 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

21 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

21 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

23 hours ago