ಸಹಕಾರ ರತ್ನ ಪ್ರಶಸ್ತಿ ಪಡೆದ ಚುಂಚೇಗೌಡರಿಗೆ ಡಿ.19ರಂದು ಸನ್ಮಾನ- ಜೆಡಿಎಸ್ ಹಿರಿಯ ಮುಖಂಡ ನರಸಿಂಹಯ್ಯ

ಸಹಕಾರ ರತ್ನ ಪ್ರಶಸ್ತಿ ಪಡೆದ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರಾದ ಚುಂಚೇಗೌಡ ಅವರಿಗೆ ಡಿ.19ರಂದು ತಾಲೂಕಿನ ಒಕ್ಕಲಿಗರ ಭವನದಲ್ಲಿ ಸನ್ಮಾನ‌ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಹಿರಿಯ ಮುಖಂಡ ಕುರುವೆಗೆರೆ ನರಸಿಂಹಯ್ಯ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸಹಕಾರಿ ರತ್ನ ಚುಂಚೇಗೌಡ ಅಭಿಮಾನಿಗಳ ವತಿಯಿಂದ ನಡೆದ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ 2022-23ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ತಾಲೂಕಿನ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರಾದ ಚುಂಚೇಗೌಡ ಅವರು ಭಾಜನರಾಗಿರುವುದು ಸಂತಸದ ಸಂಗತಿ. ಈ ಹಿನ್ನೆಲೆ ಪಕ್ಷಾತೀತವಾಗಿ ಸನ್ಮಾನ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿದೆ ಎಂದರು.

ನಂತರ ಜಿ.ಲಕ್ಷ್ಮಿಪತಿ ಮಾತನಾಡಿ, ಡಿ.19ರ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ‌ ಕೆ.ಹೆಚ್.ಮುನಿಯಪ್ಪ, ಮಾಜಿ‌ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ತಾಲೂಕು ಕಚೇರಿಯಿಂದ ಒಕ್ಕಲಿಗರ ಭವನದವರೆಗೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಚುಂಚೇಗೌಡ ಅಭಿಮಾನಿಗಳು ಭಾಗವಹಿಸಬೇಕಾಗಿದೆ ಎಂದು ಮನವಿ ಮಾಡಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ಕರ್ನಾಟಕ ರಾಜ್ಯ ತೆಂಗು ನಾರಿನ ಸಹಕಾರ ಮಹಾಮಂಡಳಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು, ರಾಮಕೃಷ್ಣ, ಭೈರೇಗೌಡ, ಅಪ್ಪಿ ವೆಂಕಟೇಶ್, ರಾಜಗೋಪಾಲ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

10 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

10 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

13 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago