ಸಹಕಾರ ರತ್ನ ಪ್ರಶಸ್ತಿ ಪಡೆದ ಚುಂಚೇಗೌಡರಿಗೆ ಡಿ.19ರಂದು ಸನ್ಮಾನ- ಜೆಡಿಎಸ್ ಹಿರಿಯ ಮುಖಂಡ ನರಸಿಂಹಯ್ಯ

ಸಹಕಾರ ರತ್ನ ಪ್ರಶಸ್ತಿ ಪಡೆದ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರಾದ ಚುಂಚೇಗೌಡ ಅವರಿಗೆ ಡಿ.19ರಂದು ತಾಲೂಕಿನ ಒಕ್ಕಲಿಗರ ಭವನದಲ್ಲಿ ಸನ್ಮಾನ‌ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಹಿರಿಯ ಮುಖಂಡ ಕುರುವೆಗೆರೆ ನರಸಿಂಹಯ್ಯ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸಹಕಾರಿ ರತ್ನ ಚುಂಚೇಗೌಡ ಅಭಿಮಾನಿಗಳ ವತಿಯಿಂದ ನಡೆದ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ 2022-23ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ತಾಲೂಕಿನ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರಾದ ಚುಂಚೇಗೌಡ ಅವರು ಭಾಜನರಾಗಿರುವುದು ಸಂತಸದ ಸಂಗತಿ. ಈ ಹಿನ್ನೆಲೆ ಪಕ್ಷಾತೀತವಾಗಿ ಸನ್ಮಾನ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿದೆ ಎಂದರು.

ನಂತರ ಜಿ.ಲಕ್ಷ್ಮಿಪತಿ ಮಾತನಾಡಿ, ಡಿ.19ರ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ‌ ಕೆ.ಹೆಚ್.ಮುನಿಯಪ್ಪ, ಮಾಜಿ‌ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ತಾಲೂಕು ಕಚೇರಿಯಿಂದ ಒಕ್ಕಲಿಗರ ಭವನದವರೆಗೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಚುಂಚೇಗೌಡ ಅಭಿಮಾನಿಗಳು ಭಾಗವಹಿಸಬೇಕಾಗಿದೆ ಎಂದು ಮನವಿ ಮಾಡಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ಕರ್ನಾಟಕ ರಾಜ್ಯ ತೆಂಗು ನಾರಿನ ಸಹಕಾರ ಮಹಾಮಂಡಳಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು, ರಾಮಕೃಷ್ಣ, ಭೈರೇಗೌಡ, ಅಪ್ಪಿ ವೆಂಕಟೇಶ್, ರಾಜಗೋಪಾಲ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

5 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

17 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

17 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

18 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

21 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago