ಸಹಕಾರ ಸಂಘಗಳು ರಾಜಕೀಯ ಕೇಂದ್ರಗಳಾಗಬಾರದು- ಕೆಎಂಎಫ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್

ತಾಲ್ಲೂಕಿನಲ್ಲಿ ಚುನಾವಣೆಗೆ ಸಜ್ಜಾಗಿರುವ ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಯಾವುದೇ ಚುನಾವಣೆಗಳನ್ನು ನಡೆಸದೆ ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಗ್ರಾಮಗಳಲ್ಲಿ ಶಾಂತಿಯ ವಾತಾವರಣ ಮೂಡುವಂತೆ ಮಾಡಬೇಕು ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಮೆಣಸಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದ ಮೊದಲನೇ ಮಹಡಿ ಕಟ್ಟಡವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸಹಕಾರ ಸಂಘಗಳು ರಾಜಕೀಯ ಕೇಂದ್ರಗಳಾಗಬಾರದು ಎಂದರು.

ಎಂಪಿಸಿಎಸ್ ಸಂಘಗಳಿಗೆ ಚುನಾವಣೆ ಇಲ್ಲದೆ ಪದಾಧಿಕಾರಿಗಳ ಆಯ್ಕೆ ನಡೆದರೆ ಗ್ರಾಮದಲ್ಲಿ ಪರಸ್ಪರ ಸೌಹಾರ್ದ ಮೂಡುತ್ತದೆ. ಹಾಲಿನ ಡೇರಿಗಳಲ್ಲಿ ದ್ವೇಷ, ಕೋಪ, ಸೇಡಿನ ರಾಜಕಾರಣ ಎಡೆ ಮಾಡಕೊಡಬಾರದು. ರೈತರ ಪರವಾಗಿ ಬಮೂಲ್ ಮತ್ತು ಕೆಎಂಎಫ್ ನಿರಂತರವಾಗಿ ಶ್ರಮಿಸುತ್ತಿದೆ. ತಾಲ್ಲೂಕಿನಲ್ಲಿ ಕೇವಲ ಆರು ಡೇರಿಗಳಿಗೆ ನೂತನ ಸುಸಜ್ಜಿತ ಕಟ್ಟಡಗಳ ಅವಶ್ಯಕತೆ ಇದ್ದು, ಶೀಘ್ರವಾಗಿ ಬಾಕಿ ಕೆಲಸವನ್ನು ಪೂರ್ಣಗೊಳಿಸಲಾಗುತ್ತದೆ ಎಂದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ರೈತರಿಗೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಸರ್ಕಾರದ ಮೂಲಕ ನೀಡಲು ಯತ್ನಿಸಲಾಗುವುದು. ಡೇರಿಗಳ ಉನ್ನತೀಕರಣಕ್ಕೆ ಸಹಕಾರ ನೀಡಲಾಗುತ್ತದೆ. ಡೇರಿಗಳಿಗೆ ಶುದ್ಧ ಹಾಲು ನೀಡಿದರೆ ರೈತರಿಗೂ ಲಾಭ, ಡೇರಿಗಳು ಲಾಭಾಂಶದಲ್ಲಿ ನಡೆದು ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ರೈತರು ಶುದ್ಧ ಹಾಲನ್ನು ಪೂರೈಕೆ ಮಾಡಿ ಎಂದರು.

ಈ ವೇಳೆ ಮೆಣಸಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ.ಸಿ ಕೃಷ್ಣಪ್ಪ, ಉಪಾಧ್ಯಕ್ಷ ದೇವರಾಜು, ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ಎಂಪಿಸಿಎಸ್ ನೌಕರರ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್, ಮೆಣಸಿ ಎಂಪಿಸಿಎಸ್ ಮುಖ್ಯಕಾರ್ಯನಿರ್ವಾಹಕ ರಾಜೇಶ್, ಹಾಲು ಪರೀಕ್ಷಕ ಅಶ್ವಥನಾರಾಯಣ ಇದ್ದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

9 minutes ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

47 minutes ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

1 hour ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

1 hour ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

4 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

5 hours ago