ಸಹಕಾರ ಸಂಘಗಳು ರಾಜಕೀಯ ಕೇಂದ್ರಗಳಾಗಬಾರದು- ಕೆಎಂಎಫ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್

ತಾಲ್ಲೂಕಿನಲ್ಲಿ ಚುನಾವಣೆಗೆ ಸಜ್ಜಾಗಿರುವ ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಯಾವುದೇ ಚುನಾವಣೆಗಳನ್ನು ನಡೆಸದೆ ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಗ್ರಾಮಗಳಲ್ಲಿ ಶಾಂತಿಯ ವಾತಾವರಣ ಮೂಡುವಂತೆ ಮಾಡಬೇಕು ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಮೆಣಸಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದ ಮೊದಲನೇ ಮಹಡಿ ಕಟ್ಟಡವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸಹಕಾರ ಸಂಘಗಳು ರಾಜಕೀಯ ಕೇಂದ್ರಗಳಾಗಬಾರದು ಎಂದರು.

ಎಂಪಿಸಿಎಸ್ ಸಂಘಗಳಿಗೆ ಚುನಾವಣೆ ಇಲ್ಲದೆ ಪದಾಧಿಕಾರಿಗಳ ಆಯ್ಕೆ ನಡೆದರೆ ಗ್ರಾಮದಲ್ಲಿ ಪರಸ್ಪರ ಸೌಹಾರ್ದ ಮೂಡುತ್ತದೆ. ಹಾಲಿನ ಡೇರಿಗಳಲ್ಲಿ ದ್ವೇಷ, ಕೋಪ, ಸೇಡಿನ ರಾಜಕಾರಣ ಎಡೆ ಮಾಡಕೊಡಬಾರದು. ರೈತರ ಪರವಾಗಿ ಬಮೂಲ್ ಮತ್ತು ಕೆಎಂಎಫ್ ನಿರಂತರವಾಗಿ ಶ್ರಮಿಸುತ್ತಿದೆ. ತಾಲ್ಲೂಕಿನಲ್ಲಿ ಕೇವಲ ಆರು ಡೇರಿಗಳಿಗೆ ನೂತನ ಸುಸಜ್ಜಿತ ಕಟ್ಟಡಗಳ ಅವಶ್ಯಕತೆ ಇದ್ದು, ಶೀಘ್ರವಾಗಿ ಬಾಕಿ ಕೆಲಸವನ್ನು ಪೂರ್ಣಗೊಳಿಸಲಾಗುತ್ತದೆ ಎಂದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ರೈತರಿಗೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಸರ್ಕಾರದ ಮೂಲಕ ನೀಡಲು ಯತ್ನಿಸಲಾಗುವುದು. ಡೇರಿಗಳ ಉನ್ನತೀಕರಣಕ್ಕೆ ಸಹಕಾರ ನೀಡಲಾಗುತ್ತದೆ. ಡೇರಿಗಳಿಗೆ ಶುದ್ಧ ಹಾಲು ನೀಡಿದರೆ ರೈತರಿಗೂ ಲಾಭ, ಡೇರಿಗಳು ಲಾಭಾಂಶದಲ್ಲಿ ನಡೆದು ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ರೈತರು ಶುದ್ಧ ಹಾಲನ್ನು ಪೂರೈಕೆ ಮಾಡಿ ಎಂದರು.

ಈ ವೇಳೆ ಮೆಣಸಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ.ಸಿ ಕೃಷ್ಣಪ್ಪ, ಉಪಾಧ್ಯಕ್ಷ ದೇವರಾಜು, ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ಎಂಪಿಸಿಎಸ್ ನೌಕರರ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್, ಮೆಣಸಿ ಎಂಪಿಸಿಎಸ್ ಮುಖ್ಯಕಾರ್ಯನಿರ್ವಾಹಕ ರಾಜೇಶ್, ಹಾಲು ಪರೀಕ್ಷಕ ಅಶ್ವಥನಾರಾಯಣ ಇದ್ದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

8 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

10 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

13 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago