ತಾಲ್ಲೂಕಿನಲ್ಲಿ ಚುನಾವಣೆಗೆ ಸಜ್ಜಾಗಿರುವ ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಯಾವುದೇ ಚುನಾವಣೆಗಳನ್ನು ನಡೆಸದೆ ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಗ್ರಾಮಗಳಲ್ಲಿ ಶಾಂತಿಯ ವಾತಾವರಣ ಮೂಡುವಂತೆ ಮಾಡಬೇಕು ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು.
ತಾಲ್ಲೂಕಿನ ಮೆಣಸಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದ ಮೊದಲನೇ ಮಹಡಿ ಕಟ್ಟಡವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸಹಕಾರ ಸಂಘಗಳು ರಾಜಕೀಯ ಕೇಂದ್ರಗಳಾಗಬಾರದು ಎಂದರು.
ಎಂಪಿಸಿಎಸ್ ಸಂಘಗಳಿಗೆ ಚುನಾವಣೆ ಇಲ್ಲದೆ ಪದಾಧಿಕಾರಿಗಳ ಆಯ್ಕೆ ನಡೆದರೆ ಗ್ರಾಮದಲ್ಲಿ ಪರಸ್ಪರ ಸೌಹಾರ್ದ ಮೂಡುತ್ತದೆ. ಹಾಲಿನ ಡೇರಿಗಳಲ್ಲಿ ದ್ವೇಷ, ಕೋಪ, ಸೇಡಿನ ರಾಜಕಾರಣ ಎಡೆ ಮಾಡಕೊಡಬಾರದು. ರೈತರ ಪರವಾಗಿ ಬಮೂಲ್ ಮತ್ತು ಕೆಎಂಎಫ್ ನಿರಂತರವಾಗಿ ಶ್ರಮಿಸುತ್ತಿದೆ. ತಾಲ್ಲೂಕಿನಲ್ಲಿ ಕೇವಲ ಆರು ಡೇರಿಗಳಿಗೆ ನೂತನ ಸುಸಜ್ಜಿತ ಕಟ್ಟಡಗಳ ಅವಶ್ಯಕತೆ ಇದ್ದು, ಶೀಘ್ರವಾಗಿ ಬಾಕಿ ಕೆಲಸವನ್ನು ಪೂರ್ಣಗೊಳಿಸಲಾಗುತ್ತದೆ ಎಂದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ, ರೈತರಿಗೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಸರ್ಕಾರದ ಮೂಲಕ ನೀಡಲು ಯತ್ನಿಸಲಾಗುವುದು. ಡೇರಿಗಳ ಉನ್ನತೀಕರಣಕ್ಕೆ ಸಹಕಾರ ನೀಡಲಾಗುತ್ತದೆ. ಡೇರಿಗಳಿಗೆ ಶುದ್ಧ ಹಾಲು ನೀಡಿದರೆ ರೈತರಿಗೂ ಲಾಭ, ಡೇರಿಗಳು ಲಾಭಾಂಶದಲ್ಲಿ ನಡೆದು ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ರೈತರು ಶುದ್ಧ ಹಾಲನ್ನು ಪೂರೈಕೆ ಮಾಡಿ ಎಂದರು.
ಈ ವೇಳೆ ಮೆಣಸಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ.ಸಿ ಕೃಷ್ಣಪ್ಪ, ಉಪಾಧ್ಯಕ್ಷ ದೇವರಾಜು, ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ಎಂಪಿಸಿಎಸ್ ನೌಕರರ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್, ಮೆಣಸಿ ಎಂಪಿಸಿಎಸ್ ಮುಖ್ಯಕಾರ್ಯನಿರ್ವಾಹಕ ರಾಜೇಶ್, ಹಾಲು ಪರೀಕ್ಷಕ ಅಶ್ವಥನಾರಾಯಣ ಇದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…