ಸಹಕಾರ ಸಂಘಗಳು ರಾಜಕೀಯ ಕೇಂದ್ರಗಳಾಗಬಾರದು- ಕೆಎಂಎಫ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್

ತಾಲ್ಲೂಕಿನಲ್ಲಿ ಚುನಾವಣೆಗೆ ಸಜ್ಜಾಗಿರುವ ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಯಾವುದೇ ಚುನಾವಣೆಗಳನ್ನು ನಡೆಸದೆ ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಗ್ರಾಮಗಳಲ್ಲಿ ಶಾಂತಿಯ ವಾತಾವರಣ ಮೂಡುವಂತೆ ಮಾಡಬೇಕು ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಮೆಣಸಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದ ಮೊದಲನೇ ಮಹಡಿ ಕಟ್ಟಡವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸಹಕಾರ ಸಂಘಗಳು ರಾಜಕೀಯ ಕೇಂದ್ರಗಳಾಗಬಾರದು ಎಂದರು.

ಎಂಪಿಸಿಎಸ್ ಸಂಘಗಳಿಗೆ ಚುನಾವಣೆ ಇಲ್ಲದೆ ಪದಾಧಿಕಾರಿಗಳ ಆಯ್ಕೆ ನಡೆದರೆ ಗ್ರಾಮದಲ್ಲಿ ಪರಸ್ಪರ ಸೌಹಾರ್ದ ಮೂಡುತ್ತದೆ. ಹಾಲಿನ ಡೇರಿಗಳಲ್ಲಿ ದ್ವೇಷ, ಕೋಪ, ಸೇಡಿನ ರಾಜಕಾರಣ ಎಡೆ ಮಾಡಕೊಡಬಾರದು. ರೈತರ ಪರವಾಗಿ ಬಮೂಲ್ ಮತ್ತು ಕೆಎಂಎಫ್ ನಿರಂತರವಾಗಿ ಶ್ರಮಿಸುತ್ತಿದೆ. ತಾಲ್ಲೂಕಿನಲ್ಲಿ ಕೇವಲ ಆರು ಡೇರಿಗಳಿಗೆ ನೂತನ ಸುಸಜ್ಜಿತ ಕಟ್ಟಡಗಳ ಅವಶ್ಯಕತೆ ಇದ್ದು, ಶೀಘ್ರವಾಗಿ ಬಾಕಿ ಕೆಲಸವನ್ನು ಪೂರ್ಣಗೊಳಿಸಲಾಗುತ್ತದೆ ಎಂದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ರೈತರಿಗೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಸರ್ಕಾರದ ಮೂಲಕ ನೀಡಲು ಯತ್ನಿಸಲಾಗುವುದು. ಡೇರಿಗಳ ಉನ್ನತೀಕರಣಕ್ಕೆ ಸಹಕಾರ ನೀಡಲಾಗುತ್ತದೆ. ಡೇರಿಗಳಿಗೆ ಶುದ್ಧ ಹಾಲು ನೀಡಿದರೆ ರೈತರಿಗೂ ಲಾಭ, ಡೇರಿಗಳು ಲಾಭಾಂಶದಲ್ಲಿ ನಡೆದು ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ರೈತರು ಶುದ್ಧ ಹಾಲನ್ನು ಪೂರೈಕೆ ಮಾಡಿ ಎಂದರು.

ಈ ವೇಳೆ ಮೆಣಸಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ.ಸಿ ಕೃಷ್ಣಪ್ಪ, ಉಪಾಧ್ಯಕ್ಷ ದೇವರಾಜು, ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ಎಂಪಿಸಿಎಸ್ ನೌಕರರ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್, ಮೆಣಸಿ ಎಂಪಿಸಿಎಸ್ ಮುಖ್ಯಕಾರ್ಯನಿರ್ವಾಹಕ ರಾಜೇಶ್, ಹಾಲು ಪರೀಕ್ಷಕ ಅಶ್ವಥನಾರಾಯಣ ಇದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

22 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago