ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಪ್ರಸಿದ್ದ ಪ್ರವಾಸಿ ತಾಣವಾದ ಸೀತಿ ಗ್ರಾಮದ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವವು ಬುಧವಾರ ಅಪಾರ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.
ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂ.ಎಲ್.ಸಿ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಚಾಲನೆ ನೀಡಿದರು.
ಬಿಸಿಲಿನ ಝಳವನ್ನೂ ಲೆಕ್ಕಿಸದೇ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಧನ್ಯತಾಭಾವ ಮೆರೆದರು ಕೋಲಾರ ತಾಲೂಕು ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದ ಇತರೆ ಭಾಗಗಳಿಂದ ಆಗಮಿಸಿದ ಅಪಾರ ಭಕ್ತಸ್ತೋಮ ರಥೋತ್ಸವಕ್ಕೆ ಸಾಕ್ಷಿಯಾದರು. ಈ ಎಲ್ಲದರ ನಡುವೆ ನೆರೆದಿದ್ದ ಭಕ್ತರು ತೇರಿಗೆ ಹೂವು, ಹಣ್ಣು ಎಸೆದು ಜೈಕಾರ ಕೂಗುತ್ತಾ ಸಂಭ್ರಮಿಸಿದರು. ಗ್ರಾಮದ ಪ್ರಮುಖ ರಾಜ ಬೀದಿಗಳಲ್ಲಿ ರಥ ಎಳೆಯಲಾಯಿತು.
ರಥೋತ್ಸವ ಪ್ರಯುಕ್ತ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿ, ಮತ್ತು ಗಂಗಮ್ಮ ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳಿಂದಾಗಿ ಪ್ರತಿನಿತ್ಯ ಜಂಜಾಟದಲ್ಲಿ ಇರುತ್ತಾರೆ. ಇಂತಹ ಜಾತ್ರೆಗಳಿಂದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿಯು ಪರಮಾತ್ಮ ನೀಡುತ್ತಾನೆ. ಜಾತ್ರೆಗಳಿಂದ ಎಲ್ಲರೂ ಒಟ್ಟುಗೂಡುವ ವಾತಾವರಣ ನಿರ್ಮಾಣವಾಗುವುದರಿಂದಾಗಿ ಎಲ್ಲರೂ ಜಾತಿ, ಧರ್ಮಗಳ ಬೇಧ ಭಾವ ಮರೆತು ಸಂತಸದಿಂದ ಪಾಲ್ಗೊಂಡಾಗ ತಮ್ಮ ಮನಸ್ಸಿನಲ್ಲಿ ನೆಮ್ಮದಿ ದೈವ ಭಕ್ತಿ ಕಾಣಬಹುದು ಎಂದು ಅಭಿಪ್ರಾಯಪಟ್ಟರು.
ಪ್ರಸಿದ್ಧ ಪ್ರವಾಸಿ ತಾಣದ ಸೀತಿ ಜಾತ್ರೆಗೆ ಎಷ್ಟೇ ಬಿಸಿಲು ಇದ್ದರು ಸಹಸ್ರಾರು ಮಂದಿ ಭಕ್ತರು ಬರುವ ಹಿನ್ನಲೆ ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ವೇಮಗಲ್ ಇನ್ಸ್ ಪೆಕ್ಟರ್ ಮಂಜು ಬಿ.ಪಿ ನೇತೃತ್ವದಲ್ಲಿ ಸೂಕ್ತ ಪೋಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಬಿಸಿಲಿನ ತಾಪ ಹೆಚ್ಚಾಗಿರುವ ಯಾವುದೇ ಬೆಂಕಿ ಅವಘಡಗಳು ಸಂಭವಿಸದಂತೆ ಬೆಸ್ಕಾಂ ಸಿಬ್ಬಂದಿ ಜಾತ್ರೆಯಲ್ಲಿ ಕಣ್ಗಾವಲಾಗಿ ತಮ್ಮ ನಿಸ್ವಾರ್ಥ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮದ್ದೇರಿ ಸೊಸೈಟಿ ಅಧ್ಯಕ್ಷ ಚಂಜಿಮಲೆ ರಮೇಶ್, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಗ್ರಾಪಂ ಅಧ್ಯಕ್ಷ ಕವಿತಾ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಖಾಜಿಕಲ್ಲಹಳ್ಳಿ ಮುನಿರಾಜು, ಉರಟ ಅಗ್ರಹಾರ ಚೌಡರೆಡ್ಡಿ, ಸೀತಿಹೊಸೂರು ಮುರಳಿಗೌಡ, ಮೈಲಾಂಡಹಳ್ಳಿ ಮುರಳಿ, ತಿಪ್ಪೇನಹಳ್ಳಿ ನಾಗೇಶ್, ತಹಶಿಲ್ದಾರ್ ನಯನ, ಮುಜರಾಯಿ ತಹಶೀಲ್ದಾರ್ ಶ್ರೀನಿವಾಸರೆಡ್ಡಿ, ಉಪ ತಹಶಿಲ್ದಾರ್ ಹೇಮಲತಾ, ಪಾರುಪಾತ್ತೇದಾರ ವೆಂಕಟೇಶ್, ವೇಮಗಲ್ ರಾಜಸ್ವ ನಿರೀಕ್ಷಕ ಬಿ.ಮಂಜು, ಇನ್ಸ್ ಪೆಕ್ಟರ್ ಮಂಜು ಬಿ.ಪಿ. ಪುರಹಳ್ಳಿ ಪಿಳ್ಳೇಗೌಡ, ಕುರುಗಲ್ ಚೌಡೇಗೌಡ, ಗ್ರಾಪಂ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು, ಸಹಸ್ರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…