Categories: ಕೋಲಾರ

ಸಹಸ್ರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಸೀತಿ ಜಾತ್ರಾ ಮಹೋತ್ಸವ

ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಪ್ರಸಿದ್ದ ಪ್ರವಾಸಿ ತಾಣವಾದ ಸೀತಿ ಗ್ರಾಮದ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವವು ಬುಧವಾರ ಅಪಾರ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂ.ಎಲ್.ಸಿ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಚಾಲನೆ ನೀಡಿದರು.

ಬಿಸಿಲಿನ ಝಳವನ್ನೂ ಲೆಕ್ಕಿಸದೇ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಧನ್ಯತಾಭಾವ ಮೆರೆದರು ಕೋಲಾರ ತಾಲೂಕು ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದ ಇತರೆ ಭಾಗಗಳಿಂದ ಆಗಮಿಸಿದ ಅಪಾರ ಭಕ್ತಸ್ತೋಮ ರಥೋತ್ಸವಕ್ಕೆ ಸಾಕ್ಷಿಯಾದರು. ಈ ಎಲ್ಲದರ ನಡುವೆ ನೆರೆದಿದ್ದ ಭಕ್ತರು ತೇರಿಗೆ ಹೂವು, ಹಣ್ಣು ಎಸೆದು ಜೈಕಾರ ಕೂಗುತ್ತಾ ಸಂಭ್ರಮಿಸಿದರು. ಗ್ರಾಮದ ಪ್ರಮುಖ ರಾಜ ಬೀದಿಗಳಲ್ಲಿ ರಥ ಎಳೆಯಲಾಯಿತು.

ರಥೋತ್ಸವ ಪ್ರಯುಕ್ತ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿ, ಮತ್ತು ಗಂಗಮ್ಮ ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳಿಂದಾಗಿ ಪ್ರತಿನಿತ್ಯ ಜಂಜಾಟದಲ್ಲಿ ಇರುತ್ತಾರೆ. ಇಂತಹ ಜಾತ್ರೆಗಳಿಂದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿಯು ಪರಮಾತ್ಮ ನೀಡುತ್ತಾನೆ. ಜಾತ್ರೆಗಳಿಂದ ಎಲ್ಲರೂ ಒಟ್ಟುಗೂಡುವ ವಾತಾವರಣ ನಿರ್ಮಾಣವಾಗುವುದರಿಂದಾಗಿ ಎಲ್ಲರೂ ಜಾತಿ, ಧರ್ಮಗಳ ಬೇಧ ಭಾವ ಮರೆತು ಸಂತಸದಿಂದ ಪಾಲ್ಗೊಂಡಾಗ ತಮ್ಮ ಮನಸ್ಸಿನಲ್ಲಿ ನೆಮ್ಮದಿ ದೈವ ಭಕ್ತಿ ಕಾಣಬಹುದು ಎಂದು ಅಭಿಪ್ರಾಯಪಟ್ಟರು.

ಪ್ರಸಿದ್ಧ ಪ್ರವಾಸಿ ತಾಣದ ಸೀತಿ ಜಾತ್ರೆಗೆ ಎಷ್ಟೇ ಬಿಸಿಲು ಇದ್ದರು ಸಹಸ್ರಾರು ಮಂದಿ ಭಕ್ತರು ಬರುವ ಹಿನ್ನಲೆ ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ವೇಮಗಲ್ ಇನ್ಸ್ ಪೆಕ್ಟರ್ ಮಂಜು ಬಿ.ಪಿ ನೇತೃತ್ವದಲ್ಲಿ ಸೂಕ್ತ ಪೋಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಬಿಸಿಲಿನ ತಾಪ ಹೆಚ್ಚಾಗಿರುವ ಯಾವುದೇ ಬೆಂಕಿ ಅವಘಡಗಳು ಸಂಭವಿಸದಂತೆ ಬೆಸ್ಕಾಂ ಸಿಬ್ಬಂದಿ ಜಾತ್ರೆಯಲ್ಲಿ ಕಣ್ಗಾವಲಾಗಿ ತಮ್ಮ ನಿಸ್ವಾರ್ಥ ಸೇವೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮದ್ದೇರಿ ಸೊಸೈಟಿ ಅಧ್ಯಕ್ಷ ಚಂಜಿಮಲೆ ರಮೇಶ್, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಗ್ರಾಪಂ ಅಧ್ಯಕ್ಷ ಕವಿತಾ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಖಾಜಿಕಲ್ಲಹಳ್ಳಿ ಮುನಿರಾಜು, ಉರಟ ಅಗ್ರಹಾರ ಚೌಡರೆಡ್ಡಿ, ಸೀತಿಹೊಸೂರು ಮುರಳಿಗೌಡ, ಮೈಲಾಂಡಹಳ್ಳಿ ಮುರಳಿ, ತಿಪ್ಪೇನಹಳ್ಳಿ ನಾಗೇಶ್, ತಹಶಿಲ್ದಾರ್ ನಯನ, ಮುಜರಾಯಿ ತಹಶೀಲ್ದಾರ್ ಶ್ರೀನಿವಾಸರೆಡ್ಡಿ, ಉಪ ತಹಶಿಲ್ದಾರ್ ಹೇಮಲತಾ, ಪಾರುಪಾತ್ತೇದಾರ ವೆಂಕಟೇಶ್, ವೇಮಗಲ್ ರಾಜಸ್ವ ನಿರೀಕ್ಷಕ ಬಿ.ಮಂಜು, ಇನ್ಸ್ ಪೆಕ್ಟರ್ ಮಂಜು ಬಿ.ಪಿ. ಪುರಹಳ್ಳಿ ಪಿಳ್ಳೇಗೌಡ, ಕುರುಗಲ್ ಚೌಡೇಗೌಡ, ಗ್ರಾಪಂ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು, ಸಹಸ್ರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

6 hours ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

16 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

17 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

19 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

20 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

23 hours ago