ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಪ್ರಸಿದ್ದ ಪ್ರವಾಸಿ ತಾಣವಾದ ಸೀತಿ ಗ್ರಾಮದ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವವು ಬುಧವಾರ ಅಪಾರ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.
ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂ.ಎಲ್.ಸಿ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಚಾಲನೆ ನೀಡಿದರು.
ಬಿಸಿಲಿನ ಝಳವನ್ನೂ ಲೆಕ್ಕಿಸದೇ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಧನ್ಯತಾಭಾವ ಮೆರೆದರು ಕೋಲಾರ ತಾಲೂಕು ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದ ಇತರೆ ಭಾಗಗಳಿಂದ ಆಗಮಿಸಿದ ಅಪಾರ ಭಕ್ತಸ್ತೋಮ ರಥೋತ್ಸವಕ್ಕೆ ಸಾಕ್ಷಿಯಾದರು. ಈ ಎಲ್ಲದರ ನಡುವೆ ನೆರೆದಿದ್ದ ಭಕ್ತರು ತೇರಿಗೆ ಹೂವು, ಹಣ್ಣು ಎಸೆದು ಜೈಕಾರ ಕೂಗುತ್ತಾ ಸಂಭ್ರಮಿಸಿದರು. ಗ್ರಾಮದ ಪ್ರಮುಖ ರಾಜ ಬೀದಿಗಳಲ್ಲಿ ರಥ ಎಳೆಯಲಾಯಿತು.
ರಥೋತ್ಸವ ಪ್ರಯುಕ್ತ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿ, ಮತ್ತು ಗಂಗಮ್ಮ ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳಿಂದಾಗಿ ಪ್ರತಿನಿತ್ಯ ಜಂಜಾಟದಲ್ಲಿ ಇರುತ್ತಾರೆ. ಇಂತಹ ಜಾತ್ರೆಗಳಿಂದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿಯು ಪರಮಾತ್ಮ ನೀಡುತ್ತಾನೆ. ಜಾತ್ರೆಗಳಿಂದ ಎಲ್ಲರೂ ಒಟ್ಟುಗೂಡುವ ವಾತಾವರಣ ನಿರ್ಮಾಣವಾಗುವುದರಿಂದಾಗಿ ಎಲ್ಲರೂ ಜಾತಿ, ಧರ್ಮಗಳ ಬೇಧ ಭಾವ ಮರೆತು ಸಂತಸದಿಂದ ಪಾಲ್ಗೊಂಡಾಗ ತಮ್ಮ ಮನಸ್ಸಿನಲ್ಲಿ ನೆಮ್ಮದಿ ದೈವ ಭಕ್ತಿ ಕಾಣಬಹುದು ಎಂದು ಅಭಿಪ್ರಾಯಪಟ್ಟರು.
ಪ್ರಸಿದ್ಧ ಪ್ರವಾಸಿ ತಾಣದ ಸೀತಿ ಜಾತ್ರೆಗೆ ಎಷ್ಟೇ ಬಿಸಿಲು ಇದ್ದರು ಸಹಸ್ರಾರು ಮಂದಿ ಭಕ್ತರು ಬರುವ ಹಿನ್ನಲೆ ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ವೇಮಗಲ್ ಇನ್ಸ್ ಪೆಕ್ಟರ್ ಮಂಜು ಬಿ.ಪಿ ನೇತೃತ್ವದಲ್ಲಿ ಸೂಕ್ತ ಪೋಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಬಿಸಿಲಿನ ತಾಪ ಹೆಚ್ಚಾಗಿರುವ ಯಾವುದೇ ಬೆಂಕಿ ಅವಘಡಗಳು ಸಂಭವಿಸದಂತೆ ಬೆಸ್ಕಾಂ ಸಿಬ್ಬಂದಿ ಜಾತ್ರೆಯಲ್ಲಿ ಕಣ್ಗಾವಲಾಗಿ ತಮ್ಮ ನಿಸ್ವಾರ್ಥ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮದ್ದೇರಿ ಸೊಸೈಟಿ ಅಧ್ಯಕ್ಷ ಚಂಜಿಮಲೆ ರಮೇಶ್, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಗ್ರಾಪಂ ಅಧ್ಯಕ್ಷ ಕವಿತಾ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಖಾಜಿಕಲ್ಲಹಳ್ಳಿ ಮುನಿರಾಜು, ಉರಟ ಅಗ್ರಹಾರ ಚೌಡರೆಡ್ಡಿ, ಸೀತಿಹೊಸೂರು ಮುರಳಿಗೌಡ, ಮೈಲಾಂಡಹಳ್ಳಿ ಮುರಳಿ, ತಿಪ್ಪೇನಹಳ್ಳಿ ನಾಗೇಶ್, ತಹಶಿಲ್ದಾರ್ ನಯನ, ಮುಜರಾಯಿ ತಹಶೀಲ್ದಾರ್ ಶ್ರೀನಿವಾಸರೆಡ್ಡಿ, ಉಪ ತಹಶಿಲ್ದಾರ್ ಹೇಮಲತಾ, ಪಾರುಪಾತ್ತೇದಾರ ವೆಂಕಟೇಶ್, ವೇಮಗಲ್ ರಾಜಸ್ವ ನಿರೀಕ್ಷಕ ಬಿ.ಮಂಜು, ಇನ್ಸ್ ಪೆಕ್ಟರ್ ಮಂಜು ಬಿ.ಪಿ. ಪುರಹಳ್ಳಿ ಪಿಳ್ಳೇಗೌಡ, ಕುರುಗಲ್ ಚೌಡೇಗೌಡ, ಗ್ರಾಪಂ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು, ಸಹಸ್ರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…