Categories: ಕೋಲಾರ

ಸಹಸ್ರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಸೀತಿ ಜಾತ್ರಾ ಮಹೋತ್ಸವ

ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಪ್ರಸಿದ್ದ ಪ್ರವಾಸಿ ತಾಣವಾದ ಸೀತಿ ಗ್ರಾಮದ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವವು ಬುಧವಾರ ಅಪಾರ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂ.ಎಲ್.ಸಿ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಚಾಲನೆ ನೀಡಿದರು.

ಬಿಸಿಲಿನ ಝಳವನ್ನೂ ಲೆಕ್ಕಿಸದೇ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಧನ್ಯತಾಭಾವ ಮೆರೆದರು ಕೋಲಾರ ತಾಲೂಕು ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದ ಇತರೆ ಭಾಗಗಳಿಂದ ಆಗಮಿಸಿದ ಅಪಾರ ಭಕ್ತಸ್ತೋಮ ರಥೋತ್ಸವಕ್ಕೆ ಸಾಕ್ಷಿಯಾದರು. ಈ ಎಲ್ಲದರ ನಡುವೆ ನೆರೆದಿದ್ದ ಭಕ್ತರು ತೇರಿಗೆ ಹೂವು, ಹಣ್ಣು ಎಸೆದು ಜೈಕಾರ ಕೂಗುತ್ತಾ ಸಂಭ್ರಮಿಸಿದರು. ಗ್ರಾಮದ ಪ್ರಮುಖ ರಾಜ ಬೀದಿಗಳಲ್ಲಿ ರಥ ಎಳೆಯಲಾಯಿತು.

ರಥೋತ್ಸವ ಪ್ರಯುಕ್ತ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿ, ಮತ್ತು ಗಂಗಮ್ಮ ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳಿಂದಾಗಿ ಪ್ರತಿನಿತ್ಯ ಜಂಜಾಟದಲ್ಲಿ ಇರುತ್ತಾರೆ. ಇಂತಹ ಜಾತ್ರೆಗಳಿಂದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿಯು ಪರಮಾತ್ಮ ನೀಡುತ್ತಾನೆ. ಜಾತ್ರೆಗಳಿಂದ ಎಲ್ಲರೂ ಒಟ್ಟುಗೂಡುವ ವಾತಾವರಣ ನಿರ್ಮಾಣವಾಗುವುದರಿಂದಾಗಿ ಎಲ್ಲರೂ ಜಾತಿ, ಧರ್ಮಗಳ ಬೇಧ ಭಾವ ಮರೆತು ಸಂತಸದಿಂದ ಪಾಲ್ಗೊಂಡಾಗ ತಮ್ಮ ಮನಸ್ಸಿನಲ್ಲಿ ನೆಮ್ಮದಿ ದೈವ ಭಕ್ತಿ ಕಾಣಬಹುದು ಎಂದು ಅಭಿಪ್ರಾಯಪಟ್ಟರು.

ಪ್ರಸಿದ್ಧ ಪ್ರವಾಸಿ ತಾಣದ ಸೀತಿ ಜಾತ್ರೆಗೆ ಎಷ್ಟೇ ಬಿಸಿಲು ಇದ್ದರು ಸಹಸ್ರಾರು ಮಂದಿ ಭಕ್ತರು ಬರುವ ಹಿನ್ನಲೆ ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ವೇಮಗಲ್ ಇನ್ಸ್ ಪೆಕ್ಟರ್ ಮಂಜು ಬಿ.ಪಿ ನೇತೃತ್ವದಲ್ಲಿ ಸೂಕ್ತ ಪೋಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಬಿಸಿಲಿನ ತಾಪ ಹೆಚ್ಚಾಗಿರುವ ಯಾವುದೇ ಬೆಂಕಿ ಅವಘಡಗಳು ಸಂಭವಿಸದಂತೆ ಬೆಸ್ಕಾಂ ಸಿಬ್ಬಂದಿ ಜಾತ್ರೆಯಲ್ಲಿ ಕಣ್ಗಾವಲಾಗಿ ತಮ್ಮ ನಿಸ್ವಾರ್ಥ ಸೇವೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮದ್ದೇರಿ ಸೊಸೈಟಿ ಅಧ್ಯಕ್ಷ ಚಂಜಿಮಲೆ ರಮೇಶ್, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಗ್ರಾಪಂ ಅಧ್ಯಕ್ಷ ಕವಿತಾ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಖಾಜಿಕಲ್ಲಹಳ್ಳಿ ಮುನಿರಾಜು, ಉರಟ ಅಗ್ರಹಾರ ಚೌಡರೆಡ್ಡಿ, ಸೀತಿಹೊಸೂರು ಮುರಳಿಗೌಡ, ಮೈಲಾಂಡಹಳ್ಳಿ ಮುರಳಿ, ತಿಪ್ಪೇನಹಳ್ಳಿ ನಾಗೇಶ್, ತಹಶಿಲ್ದಾರ್ ನಯನ, ಮುಜರಾಯಿ ತಹಶೀಲ್ದಾರ್ ಶ್ರೀನಿವಾಸರೆಡ್ಡಿ, ಉಪ ತಹಶಿಲ್ದಾರ್ ಹೇಮಲತಾ, ಪಾರುಪಾತ್ತೇದಾರ ವೆಂಕಟೇಶ್, ವೇಮಗಲ್ ರಾಜಸ್ವ ನಿರೀಕ್ಷಕ ಬಿ.ಮಂಜು, ಇನ್ಸ್ ಪೆಕ್ಟರ್ ಮಂಜು ಬಿ.ಪಿ. ಪುರಹಳ್ಳಿ ಪಿಳ್ಳೇಗೌಡ, ಕುರುಗಲ್ ಚೌಡೇಗೌಡ, ಗ್ರಾಪಂ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು, ಸಹಸ್ರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

10 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

10 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

11 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

13 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

16 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

19 hours ago