Categories: ಕೋಲಾರ

ಸಹಸ್ರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಸೀತಿ ಜಾತ್ರಾ ಮಹೋತ್ಸವ

ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಪ್ರಸಿದ್ದ ಪ್ರವಾಸಿ ತಾಣವಾದ ಸೀತಿ ಗ್ರಾಮದ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವವು ಬುಧವಾರ ಅಪಾರ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂ.ಎಲ್.ಸಿ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಚಾಲನೆ ನೀಡಿದರು.

ಬಿಸಿಲಿನ ಝಳವನ್ನೂ ಲೆಕ್ಕಿಸದೇ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಧನ್ಯತಾಭಾವ ಮೆರೆದರು ಕೋಲಾರ ತಾಲೂಕು ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದ ಇತರೆ ಭಾಗಗಳಿಂದ ಆಗಮಿಸಿದ ಅಪಾರ ಭಕ್ತಸ್ತೋಮ ರಥೋತ್ಸವಕ್ಕೆ ಸಾಕ್ಷಿಯಾದರು. ಈ ಎಲ್ಲದರ ನಡುವೆ ನೆರೆದಿದ್ದ ಭಕ್ತರು ತೇರಿಗೆ ಹೂವು, ಹಣ್ಣು ಎಸೆದು ಜೈಕಾರ ಕೂಗುತ್ತಾ ಸಂಭ್ರಮಿಸಿದರು. ಗ್ರಾಮದ ಪ್ರಮುಖ ರಾಜ ಬೀದಿಗಳಲ್ಲಿ ರಥ ಎಳೆಯಲಾಯಿತು.

ರಥೋತ್ಸವ ಪ್ರಯುಕ್ತ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿ, ಮತ್ತು ಗಂಗಮ್ಮ ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳಿಂದಾಗಿ ಪ್ರತಿನಿತ್ಯ ಜಂಜಾಟದಲ್ಲಿ ಇರುತ್ತಾರೆ. ಇಂತಹ ಜಾತ್ರೆಗಳಿಂದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿಯು ಪರಮಾತ್ಮ ನೀಡುತ್ತಾನೆ. ಜಾತ್ರೆಗಳಿಂದ ಎಲ್ಲರೂ ಒಟ್ಟುಗೂಡುವ ವಾತಾವರಣ ನಿರ್ಮಾಣವಾಗುವುದರಿಂದಾಗಿ ಎಲ್ಲರೂ ಜಾತಿ, ಧರ್ಮಗಳ ಬೇಧ ಭಾವ ಮರೆತು ಸಂತಸದಿಂದ ಪಾಲ್ಗೊಂಡಾಗ ತಮ್ಮ ಮನಸ್ಸಿನಲ್ಲಿ ನೆಮ್ಮದಿ ದೈವ ಭಕ್ತಿ ಕಾಣಬಹುದು ಎಂದು ಅಭಿಪ್ರಾಯಪಟ್ಟರು.

ಪ್ರಸಿದ್ಧ ಪ್ರವಾಸಿ ತಾಣದ ಸೀತಿ ಜಾತ್ರೆಗೆ ಎಷ್ಟೇ ಬಿಸಿಲು ಇದ್ದರು ಸಹಸ್ರಾರು ಮಂದಿ ಭಕ್ತರು ಬರುವ ಹಿನ್ನಲೆ ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ವೇಮಗಲ್ ಇನ್ಸ್ ಪೆಕ್ಟರ್ ಮಂಜು ಬಿ.ಪಿ ನೇತೃತ್ವದಲ್ಲಿ ಸೂಕ್ತ ಪೋಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಬಿಸಿಲಿನ ತಾಪ ಹೆಚ್ಚಾಗಿರುವ ಯಾವುದೇ ಬೆಂಕಿ ಅವಘಡಗಳು ಸಂಭವಿಸದಂತೆ ಬೆಸ್ಕಾಂ ಸಿಬ್ಬಂದಿ ಜಾತ್ರೆಯಲ್ಲಿ ಕಣ್ಗಾವಲಾಗಿ ತಮ್ಮ ನಿಸ್ವಾರ್ಥ ಸೇವೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮದ್ದೇರಿ ಸೊಸೈಟಿ ಅಧ್ಯಕ್ಷ ಚಂಜಿಮಲೆ ರಮೇಶ್, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಗ್ರಾಪಂ ಅಧ್ಯಕ್ಷ ಕವಿತಾ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಖಾಜಿಕಲ್ಲಹಳ್ಳಿ ಮುನಿರಾಜು, ಉರಟ ಅಗ್ರಹಾರ ಚೌಡರೆಡ್ಡಿ, ಸೀತಿಹೊಸೂರು ಮುರಳಿಗೌಡ, ಮೈಲಾಂಡಹಳ್ಳಿ ಮುರಳಿ, ತಿಪ್ಪೇನಹಳ್ಳಿ ನಾಗೇಶ್, ತಹಶಿಲ್ದಾರ್ ನಯನ, ಮುಜರಾಯಿ ತಹಶೀಲ್ದಾರ್ ಶ್ರೀನಿವಾಸರೆಡ್ಡಿ, ಉಪ ತಹಶಿಲ್ದಾರ್ ಹೇಮಲತಾ, ಪಾರುಪಾತ್ತೇದಾರ ವೆಂಕಟೇಶ್, ವೇಮಗಲ್ ರಾಜಸ್ವ ನಿರೀಕ್ಷಕ ಬಿ.ಮಂಜು, ಇನ್ಸ್ ಪೆಕ್ಟರ್ ಮಂಜು ಬಿ.ಪಿ. ಪುರಹಳ್ಳಿ ಪಿಳ್ಳೇಗೌಡ, ಕುರುಗಲ್ ಚೌಡೇಗೌಡ, ಗ್ರಾಪಂ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು, ಸಹಸ್ರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

24 minutes ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

11 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

16 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago