Categories: ಕೋಲಾರ

ಸಹಸ್ರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಸೀತಿ ಜಾತ್ರಾ ಮಹೋತ್ಸವ

ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಪ್ರಸಿದ್ದ ಪ್ರವಾಸಿ ತಾಣವಾದ ಸೀತಿ ಗ್ರಾಮದ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವವು ಬುಧವಾರ ಅಪಾರ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂ.ಎಲ್.ಸಿ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಚಾಲನೆ ನೀಡಿದರು.

ಬಿಸಿಲಿನ ಝಳವನ್ನೂ ಲೆಕ್ಕಿಸದೇ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಧನ್ಯತಾಭಾವ ಮೆರೆದರು ಕೋಲಾರ ತಾಲೂಕು ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದ ಇತರೆ ಭಾಗಗಳಿಂದ ಆಗಮಿಸಿದ ಅಪಾರ ಭಕ್ತಸ್ತೋಮ ರಥೋತ್ಸವಕ್ಕೆ ಸಾಕ್ಷಿಯಾದರು. ಈ ಎಲ್ಲದರ ನಡುವೆ ನೆರೆದಿದ್ದ ಭಕ್ತರು ತೇರಿಗೆ ಹೂವು, ಹಣ್ಣು ಎಸೆದು ಜೈಕಾರ ಕೂಗುತ್ತಾ ಸಂಭ್ರಮಿಸಿದರು. ಗ್ರಾಮದ ಪ್ರಮುಖ ರಾಜ ಬೀದಿಗಳಲ್ಲಿ ರಥ ಎಳೆಯಲಾಯಿತು.

ರಥೋತ್ಸವ ಪ್ರಯುಕ್ತ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿ, ಮತ್ತು ಗಂಗಮ್ಮ ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳಿಂದಾಗಿ ಪ್ರತಿನಿತ್ಯ ಜಂಜಾಟದಲ್ಲಿ ಇರುತ್ತಾರೆ. ಇಂತಹ ಜಾತ್ರೆಗಳಿಂದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿಯು ಪರಮಾತ್ಮ ನೀಡುತ್ತಾನೆ. ಜಾತ್ರೆಗಳಿಂದ ಎಲ್ಲರೂ ಒಟ್ಟುಗೂಡುವ ವಾತಾವರಣ ನಿರ್ಮಾಣವಾಗುವುದರಿಂದಾಗಿ ಎಲ್ಲರೂ ಜಾತಿ, ಧರ್ಮಗಳ ಬೇಧ ಭಾವ ಮರೆತು ಸಂತಸದಿಂದ ಪಾಲ್ಗೊಂಡಾಗ ತಮ್ಮ ಮನಸ್ಸಿನಲ್ಲಿ ನೆಮ್ಮದಿ ದೈವ ಭಕ್ತಿ ಕಾಣಬಹುದು ಎಂದು ಅಭಿಪ್ರಾಯಪಟ್ಟರು.

ಪ್ರಸಿದ್ಧ ಪ್ರವಾಸಿ ತಾಣದ ಸೀತಿ ಜಾತ್ರೆಗೆ ಎಷ್ಟೇ ಬಿಸಿಲು ಇದ್ದರು ಸಹಸ್ರಾರು ಮಂದಿ ಭಕ್ತರು ಬರುವ ಹಿನ್ನಲೆ ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ವೇಮಗಲ್ ಇನ್ಸ್ ಪೆಕ್ಟರ್ ಮಂಜು ಬಿ.ಪಿ ನೇತೃತ್ವದಲ್ಲಿ ಸೂಕ್ತ ಪೋಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಬಿಸಿಲಿನ ತಾಪ ಹೆಚ್ಚಾಗಿರುವ ಯಾವುದೇ ಬೆಂಕಿ ಅವಘಡಗಳು ಸಂಭವಿಸದಂತೆ ಬೆಸ್ಕಾಂ ಸಿಬ್ಬಂದಿ ಜಾತ್ರೆಯಲ್ಲಿ ಕಣ್ಗಾವಲಾಗಿ ತಮ್ಮ ನಿಸ್ವಾರ್ಥ ಸೇವೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮದ್ದೇರಿ ಸೊಸೈಟಿ ಅಧ್ಯಕ್ಷ ಚಂಜಿಮಲೆ ರಮೇಶ್, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಗ್ರಾಪಂ ಅಧ್ಯಕ್ಷ ಕವಿತಾ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಖಾಜಿಕಲ್ಲಹಳ್ಳಿ ಮುನಿರಾಜು, ಉರಟ ಅಗ್ರಹಾರ ಚೌಡರೆಡ್ಡಿ, ಸೀತಿಹೊಸೂರು ಮುರಳಿಗೌಡ, ಮೈಲಾಂಡಹಳ್ಳಿ ಮುರಳಿ, ತಿಪ್ಪೇನಹಳ್ಳಿ ನಾಗೇಶ್, ತಹಶಿಲ್ದಾರ್ ನಯನ, ಮುಜರಾಯಿ ತಹಶೀಲ್ದಾರ್ ಶ್ರೀನಿವಾಸರೆಡ್ಡಿ, ಉಪ ತಹಶಿಲ್ದಾರ್ ಹೇಮಲತಾ, ಪಾರುಪಾತ್ತೇದಾರ ವೆಂಕಟೇಶ್, ವೇಮಗಲ್ ರಾಜಸ್ವ ನಿರೀಕ್ಷಕ ಬಿ.ಮಂಜು, ಇನ್ಸ್ ಪೆಕ್ಟರ್ ಮಂಜು ಬಿ.ಪಿ. ಪುರಹಳ್ಳಿ ಪಿಳ್ಳೇಗೌಡ, ಕುರುಗಲ್ ಚೌಡೇಗೌಡ, ಗ್ರಾಪಂ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು, ಸಹಸ್ರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

16 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago