Categories: ಕೋಲಾರ

ಸಹಸ್ರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಸೀತಿ ಜಾತ್ರಾ ಮಹೋತ್ಸವ

ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಪ್ರಸಿದ್ದ ಪ್ರವಾಸಿ ತಾಣವಾದ ಸೀತಿ ಗ್ರಾಮದ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವವು ಬುಧವಾರ ಅಪಾರ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಶಾಸಕ ಕೊತ್ತೂರು ಜಿ ಮಂಜುನಾಥ್, ಎಂ.ಎಲ್.ಸಿ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಚಾಲನೆ ನೀಡಿದರು.

ಬಿಸಿಲಿನ ಝಳವನ್ನೂ ಲೆಕ್ಕಿಸದೇ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಧನ್ಯತಾಭಾವ ಮೆರೆದರು ಕೋಲಾರ ತಾಲೂಕು ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದ ಇತರೆ ಭಾಗಗಳಿಂದ ಆಗಮಿಸಿದ ಅಪಾರ ಭಕ್ತಸ್ತೋಮ ರಥೋತ್ಸವಕ್ಕೆ ಸಾಕ್ಷಿಯಾದರು. ಈ ಎಲ್ಲದರ ನಡುವೆ ನೆರೆದಿದ್ದ ಭಕ್ತರು ತೇರಿಗೆ ಹೂವು, ಹಣ್ಣು ಎಸೆದು ಜೈಕಾರ ಕೂಗುತ್ತಾ ಸಂಭ್ರಮಿಸಿದರು. ಗ್ರಾಮದ ಪ್ರಮುಖ ರಾಜ ಬೀದಿಗಳಲ್ಲಿ ರಥ ಎಳೆಯಲಾಯಿತು.

ರಥೋತ್ಸವ ಪ್ರಯುಕ್ತ ಶ್ರೀ ಪತೇಶ್ವರ ಮತ್ತು ಶ್ರೀ ಭೈರವೇಶ್ವರಸ್ವಾಮಿ, ಮತ್ತು ಗಂಗಮ್ಮ ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳಿಂದಾಗಿ ಪ್ರತಿನಿತ್ಯ ಜಂಜಾಟದಲ್ಲಿ ಇರುತ್ತಾರೆ. ಇಂತಹ ಜಾತ್ರೆಗಳಿಂದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿಯು ಪರಮಾತ್ಮ ನೀಡುತ್ತಾನೆ. ಜಾತ್ರೆಗಳಿಂದ ಎಲ್ಲರೂ ಒಟ್ಟುಗೂಡುವ ವಾತಾವರಣ ನಿರ್ಮಾಣವಾಗುವುದರಿಂದಾಗಿ ಎಲ್ಲರೂ ಜಾತಿ, ಧರ್ಮಗಳ ಬೇಧ ಭಾವ ಮರೆತು ಸಂತಸದಿಂದ ಪಾಲ್ಗೊಂಡಾಗ ತಮ್ಮ ಮನಸ್ಸಿನಲ್ಲಿ ನೆಮ್ಮದಿ ದೈವ ಭಕ್ತಿ ಕಾಣಬಹುದು ಎಂದು ಅಭಿಪ್ರಾಯಪಟ್ಟರು.

ಪ್ರಸಿದ್ಧ ಪ್ರವಾಸಿ ತಾಣದ ಸೀತಿ ಜಾತ್ರೆಗೆ ಎಷ್ಟೇ ಬಿಸಿಲು ಇದ್ದರು ಸಹಸ್ರಾರು ಮಂದಿ ಭಕ್ತರು ಬರುವ ಹಿನ್ನಲೆ ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ವೇಮಗಲ್ ಇನ್ಸ್ ಪೆಕ್ಟರ್ ಮಂಜು ಬಿ.ಪಿ ನೇತೃತ್ವದಲ್ಲಿ ಸೂಕ್ತ ಪೋಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಬಿಸಿಲಿನ ತಾಪ ಹೆಚ್ಚಾಗಿರುವ ಯಾವುದೇ ಬೆಂಕಿ ಅವಘಡಗಳು ಸಂಭವಿಸದಂತೆ ಬೆಸ್ಕಾಂ ಸಿಬ್ಬಂದಿ ಜಾತ್ರೆಯಲ್ಲಿ ಕಣ್ಗಾವಲಾಗಿ ತಮ್ಮ ನಿಸ್ವಾರ್ಥ ಸೇವೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮದ್ದೇರಿ ಸೊಸೈಟಿ ಅಧ್ಯಕ್ಷ ಚಂಜಿಮಲೆ ರಮೇಶ್, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಗ್ರಾಪಂ ಅಧ್ಯಕ್ಷ ಕವಿತಾ ಮುನಿರಾಜು, ಉಪಾಧ್ಯಕ್ಷೆ ಅನಿತಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಖಾಜಿಕಲ್ಲಹಳ್ಳಿ ಮುನಿರಾಜು, ಉರಟ ಅಗ್ರಹಾರ ಚೌಡರೆಡ್ಡಿ, ಸೀತಿಹೊಸೂರು ಮುರಳಿಗೌಡ, ಮೈಲಾಂಡಹಳ್ಳಿ ಮುರಳಿ, ತಿಪ್ಪೇನಹಳ್ಳಿ ನಾಗೇಶ್, ತಹಶಿಲ್ದಾರ್ ನಯನ, ಮುಜರಾಯಿ ತಹಶೀಲ್ದಾರ್ ಶ್ರೀನಿವಾಸರೆಡ್ಡಿ, ಉಪ ತಹಶಿಲ್ದಾರ್ ಹೇಮಲತಾ, ಪಾರುಪಾತ್ತೇದಾರ ವೆಂಕಟೇಶ್, ವೇಮಗಲ್ ರಾಜಸ್ವ ನಿರೀಕ್ಷಕ ಬಿ.ಮಂಜು, ಇನ್ಸ್ ಪೆಕ್ಟರ್ ಮಂಜು ಬಿ.ಪಿ. ಪುರಹಳ್ಳಿ ಪಿಳ್ಳೇಗೌಡ, ಕುರುಗಲ್ ಚೌಡೇಗೌಡ, ಗ್ರಾಪಂ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು, ಸಹಸ್ರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

15 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago