ಸಹೋದರರಿಗೆ ರಾಖಿ ಕಟ್ಟಿ ಸಾವನ್ನಪ್ಪಿದ ಸಹೋದರಿ..!

ಇಂದು ನಾಡಿನೆಲ್ಲೆಡೆ ರಕ್ಷಾ ಬಂಧನ ಹಬ್ಬವನ್ನ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಸಹೋದರ ಹಾಗೂ ಸಹೋದರಿಯರ ನಡುವಿನ ಬಾಂಧವ್ಯವನ್ನ ಗಟ್ಟಿ ಮಾಡುವ ಹಬ್ಬ ಇದು. ಈ ದಿನದಂದು, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವುದರಿಂದ ಇಬ್ಬರ ನಡುವಿನ ಸಂಬಂಧ ಗಟ್ಟಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಆದರೆ, ಸಹೋದರರಿಗೆ ರಾಖಿ‌ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಸಹೋದರಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಅಪ್ರಾಪ್ತ ವಿದ್ಯಾರ್ಥಿನಿ ಕೆಲ ಪುಂಡರ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದಳು. ಸಾಯುತ್ತೇನೆಂದು ತಿಳಿದು ತನ್ನ ಸಹೋದರರಗೆ ಕೊನೆಯ ಬಾರಿಗೆ ರಾಖಿ ಕಟ್ಟಿದಳು..ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.

ತೆಲಂಗಾಣದ ಮಹಬೂಬಾಬಾದ್‌ನಲ್ಲಿರುವ ಆಸ್ಪತ್ರೆಯಲ್ಲಿಂದು ನಡೆದಿದೆ.

ತನ್ನ ಪ್ರೇಮ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಯುವತಿಗೆ ಒತ್ತಾಯಿಸಿ 17 ವರ್ಷದ ಯುವಕನೋರ್ವ ಕಿರುಕುಳ ನೀಡುತ್ತಿದ್ದ. ಯುವಕನ‌ ಕಿರುಕುಳ ತಾಳಲಾರದೆ ಬಾಲಕಿ ಶನಿವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.  ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ನೋಡಿದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಬಾಲಕಿ ಕೊಡಾಡ್‌ನಲ್ಲಿ ಡಿಪ್ಲೊಮಾ ಓದುತ್ತಿದ್ದಳು, ಅಲ್ಲಿ ಒಬ್ಬ ವ್ಯಕ್ತಿ ತನ್ನನ್ನು ಮದುವೆಯಾಗುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿ ಆತನ ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದಳು. ಈ ಹಿನ್ನೆಲೆ ಆ ಯುವಕ ತನ್ನ ಕೆಲವು ಸ್ನೇಹಿತರ ಜೊತೆಗೂಡಿ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದನು. ಪುಂಡರ ಗುಂಪಿನಿಂದ ಕಿರುಕುಳವನ್ನು ಸಹಿಸಲಾಗದ ಆಕೆ ತನ್ನ ಜೀವನವನ್ನು ಕೊನೆಗೊಳಿಸುವ ಪ್ರಯತ್ನದಲ್ಲಿ ವಿಷ ಸೇವಿಸಿದ್ದಾಳೆ.

ನರಸಿಂಹಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಿರುಕುಳ ನೀಡಿದ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 hour ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

10 hours ago