ಸಹೋದರರಿಗೆ ರಾಖಿ ಕಟ್ಟಿ ಸಾವನ್ನಪ್ಪಿದ ಸಹೋದರಿ..!

ಇಂದು ನಾಡಿನೆಲ್ಲೆಡೆ ರಕ್ಷಾ ಬಂಧನ ಹಬ್ಬವನ್ನ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಸಹೋದರ ಹಾಗೂ ಸಹೋದರಿಯರ ನಡುವಿನ ಬಾಂಧವ್ಯವನ್ನ ಗಟ್ಟಿ ಮಾಡುವ ಹಬ್ಬ ಇದು. ಈ ದಿನದಂದು, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವುದರಿಂದ ಇಬ್ಬರ ನಡುವಿನ ಸಂಬಂಧ ಗಟ್ಟಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಆದರೆ, ಸಹೋದರರಿಗೆ ರಾಖಿ‌ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಸಹೋದರಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಅಪ್ರಾಪ್ತ ವಿದ್ಯಾರ್ಥಿನಿ ಕೆಲ ಪುಂಡರ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದಳು. ಸಾಯುತ್ತೇನೆಂದು ತಿಳಿದು ತನ್ನ ಸಹೋದರರಗೆ ಕೊನೆಯ ಬಾರಿಗೆ ರಾಖಿ ಕಟ್ಟಿದಳು..ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.

ತೆಲಂಗಾಣದ ಮಹಬೂಬಾಬಾದ್‌ನಲ್ಲಿರುವ ಆಸ್ಪತ್ರೆಯಲ್ಲಿಂದು ನಡೆದಿದೆ.

ತನ್ನ ಪ್ರೇಮ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಯುವತಿಗೆ ಒತ್ತಾಯಿಸಿ 17 ವರ್ಷದ ಯುವಕನೋರ್ವ ಕಿರುಕುಳ ನೀಡುತ್ತಿದ್ದ. ಯುವಕನ‌ ಕಿರುಕುಳ ತಾಳಲಾರದೆ ಬಾಲಕಿ ಶನಿವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.  ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ನೋಡಿದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಬಾಲಕಿ ಕೊಡಾಡ್‌ನಲ್ಲಿ ಡಿಪ್ಲೊಮಾ ಓದುತ್ತಿದ್ದಳು, ಅಲ್ಲಿ ಒಬ್ಬ ವ್ಯಕ್ತಿ ತನ್ನನ್ನು ಮದುವೆಯಾಗುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿ ಆತನ ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದಳು. ಈ ಹಿನ್ನೆಲೆ ಆ ಯುವಕ ತನ್ನ ಕೆಲವು ಸ್ನೇಹಿತರ ಜೊತೆಗೂಡಿ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದನು. ಪುಂಡರ ಗುಂಪಿನಿಂದ ಕಿರುಕುಳವನ್ನು ಸಹಿಸಲಾಗದ ಆಕೆ ತನ್ನ ಜೀವನವನ್ನು ಕೊನೆಗೊಳಿಸುವ ಪ್ರಯತ್ನದಲ್ಲಿ ವಿಷ ಸೇವಿಸಿದ್ದಾಳೆ.

ನರಸಿಂಹಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಿರುಕುಳ ನೀಡಿದ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

2 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

7 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

8 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

8 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

10 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

11 hours ago