ಸಹೋದರರಿಗೆ ರಾಖಿ ಕಟ್ಟಿ ಸಾವನ್ನಪ್ಪಿದ ಸಹೋದರಿ..!

ಇಂದು ನಾಡಿನೆಲ್ಲೆಡೆ ರಕ್ಷಾ ಬಂಧನ ಹಬ್ಬವನ್ನ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಸಹೋದರ ಹಾಗೂ ಸಹೋದರಿಯರ ನಡುವಿನ ಬಾಂಧವ್ಯವನ್ನ ಗಟ್ಟಿ ಮಾಡುವ ಹಬ್ಬ ಇದು. ಈ ದಿನದಂದು, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವುದರಿಂದ ಇಬ್ಬರ ನಡುವಿನ ಸಂಬಂಧ ಗಟ್ಟಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಆದರೆ, ಸಹೋದರರಿಗೆ ರಾಖಿ‌ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಸಹೋದರಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಅಪ್ರಾಪ್ತ ವಿದ್ಯಾರ್ಥಿನಿ ಕೆಲ ಪುಂಡರ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದಳು. ಸಾಯುತ್ತೇನೆಂದು ತಿಳಿದು ತನ್ನ ಸಹೋದರರಗೆ ಕೊನೆಯ ಬಾರಿಗೆ ರಾಖಿ ಕಟ್ಟಿದಳು..ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.

ತೆಲಂಗಾಣದ ಮಹಬೂಬಾಬಾದ್‌ನಲ್ಲಿರುವ ಆಸ್ಪತ್ರೆಯಲ್ಲಿಂದು ನಡೆದಿದೆ.

ತನ್ನ ಪ್ರೇಮ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ಯುವತಿಗೆ ಒತ್ತಾಯಿಸಿ 17 ವರ್ಷದ ಯುವಕನೋರ್ವ ಕಿರುಕುಳ ನೀಡುತ್ತಿದ್ದ. ಯುವಕನ‌ ಕಿರುಕುಳ ತಾಳಲಾರದೆ ಬಾಲಕಿ ಶನಿವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.  ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ನೋಡಿದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಬಾಲಕಿ ಕೊಡಾಡ್‌ನಲ್ಲಿ ಡಿಪ್ಲೊಮಾ ಓದುತ್ತಿದ್ದಳು, ಅಲ್ಲಿ ಒಬ್ಬ ವ್ಯಕ್ತಿ ತನ್ನನ್ನು ಮದುವೆಯಾಗುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿ ಆತನ ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದಳು. ಈ ಹಿನ್ನೆಲೆ ಆ ಯುವಕ ತನ್ನ ಕೆಲವು ಸ್ನೇಹಿತರ ಜೊತೆಗೂಡಿ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದನು. ಪುಂಡರ ಗುಂಪಿನಿಂದ ಕಿರುಕುಳವನ್ನು ಸಹಿಸಲಾಗದ ಆಕೆ ತನ್ನ ಜೀವನವನ್ನು ಕೊನೆಗೊಳಿಸುವ ಪ್ರಯತ್ನದಲ್ಲಿ ವಿಷ ಸೇವಿಸಿದ್ದಾಳೆ.

ನರಸಿಂಹಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಿರುಕುಳ ನೀಡಿದ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

9 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

11 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

22 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

23 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago