ಸಹೋದ್ಯೋಗಿಗಳಿಗೆ ಸುದೀರ್ಘ ಪತ್ರ ಬರೆದ‌ ನೂತನ ಪೊಲೀಸ್‌ ಮಹಾನಿರ್ದೇಶಕ (ಡಿಜಿ-ಐಜಿಪಿ) ಡಾ.ಎಂ.ಎ ಸಲೀಂ

ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕ (ಡಿಜಿ-ಐಜಿಪಿ) ಡಾ.ಎಂ.ಎ. ಸಲೀಂ ಅವರು ಇಲಾಖೆಯ ಸುಧಾರಣೆ, ಕ್ರಿಯಾಶೀಲತೆ, ಸಾಮರ್ಥ್ಯ ವೃದ್ಧಿ ಸಂಬಂಧ ಸಹೋದ್ಯೋಗಿಗಳಿಗೆ ಸುದೀರ್ಘ ಪತ್ರ ಬರೆದು ಬೆಂಬಲ ಕೋರಿದ್ದಾರೆ. ಶಾಂತಿ, ಸೌಹಾರ್ದತೆ ಕಾಪಾಡಲು ಅವರು ಕರೆ ನೀಡಿದ್ದಾರೆ.

ಸಮಾಜಸ್ನೇಹಿಯಾಗಿ ಇಲಾಖೆಯನ್ನು ಆಧುನೀಕರಣಗೊಳಿಸಲು ಸೂಚಿಸಿದ್ದಾರೆ. ಕಿರಿಯ ಅಧಿಕಾರಿಗಳಿಂದ ಹಿಡಿದು ಹಿರಿಯ ಅಧಿಕಾರಿಗಳವರೆಗೆ ಎಲ್ಲರೂ ಬೆಂಬಲ ನೀಡಬೇಕೆಂದು ಅವರು ಕೋರಿದ್ದಾರೆ.

ಸಲೀಂ ಅವರು ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಅಪರಾಧ ತಡೆಗೆ ಕ್ರಮಗಳನ್ನು ಸೂಚಿಸಿದ್ದಾರೆ. ತಂತ್ರಜ್ಞಾನ ಯುಗದಲ್ಲಿ ಸೈಬರ್ ಅಪರಾಧ ತಡೆಗೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

ಈ ಗುರಿ ಸಾಧನೆಗೆ, ಪೊಲೀಸ್‌ ಇಲಾಖೆಯ ಅಡಿಪಾಯವಾಗಿರುವ ಕಿರಿಯ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಹಿಡಿದು ಹಿರಿಯ ಪೊಲೀಸ್‌ ಅಧಿಕಾರಿಗಳವರೆಗಿನ ಎಲ್ಲಾ ಸಹೋದ್ಯೋಗಿಗಳಿಂದ ಸದಾ ಬೆಂಬಲ ಅಪೇಕ್ಷಿಸುತ್ತೇನೆ. ಸಮಾಜದಲ್ಲಿ ನೆಮ್ಮದಿ ಹೆಚ್ಚಿಸುವ, ಶಾಂತಿ ಸ್ಥಾಪಿಸುವ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ, ದುರ್ಬಲ ವರ್ಗದವರು ಮತ್ತು ನೊಂದವರಿಗೆ ನ್ಯಾಯ ಕೊಡಿಸುವ ವಿಶೇಷ ಅವಕಾಶ ಮತ್ತು ಜವಾಬ್ದಾರಿ ಪೊಲೀಸರ ಮೇಲಿದೆ ಎಂಬುದನ್ನು ಮರೆಯಕೂಡದು. ಈ ನಾಡು ಮತ್ತು ನಾಡಿನ ಜನತೆಯ ಒಳಿತಿಗಾಗಿ ಎಲ್ಲರೂ ಶಕ್ತಿ ಮೀರಿ ಪಾರದರ್ಶಕತೆ, ವೃತ್ತಿಪರತೆಯಿಂದ ಸೇವೆ ಸಲ್ಲಿಸಿ ಕರ್ನಾಟಕವನ್ನು ದೇಶದಲ್ಲೇ ಅತಿ ಹೆಚ್ಚು ಸುರಕ್ಷಿತ ವಾತಾವರಣವಿರುವ ಹಾಗೂ ಅತ್ಯುತ್ತಮ ವಾಸ ಯೋಗ್ಯ ತಾಣವಾಗಿ ಪರಿವರ್ತಿಸಲು ಪಣ ತೊಡೋಣ ಎಂದು ಕಿವಿಮಾತು ಹೇಳಿದ್ದಾರೆ.

ಪತ್ರದಲ್ಲಿನ ಅಂಶಗಳು…

* ಕಾನೂನು ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವುದು, ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲದಂತೆ ಪರಿಣಾಮಕಾರಿ ಹಾಗೂ ಸಮಯೋಚಿತ ಕ್ರಮಗಳನ್ನು ಕೈಗೊಳ್ಳುವುದು. ಕಾನೂನು ಸುವ್ಯವಸ್ಥೆ ಮತ್ತು ಸೌಹಾರ್ದತೆಗೆ ಅಪಾಯ ತಂದೊಡ್ಡಬಹುದಾದ ವ್ಯಕ್ತಿಗಳ ಹಾಗೂ ಶಕ್ತಿಗಳ ವಿರುದ್ಧ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು.

* ಅಪರಾಧಗಳನ್ನು ವ್ಯವಸ್ಥಿತವಾಗಿ ತಡೆಯುವ ಕ್ರಮ ಕೈಗೊಳ್ಳುವುದು ಮತ್ತು ಅಪರಾಧ ಪ್ರಕರಣಗಳ ಸಮರ್ಥ ಹಾಗೂ ನಿಖರ ತನಿಖೆಯನ್ನು ನಡೆಸುವ ಮೂಲಕ ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುವುದನ್ನು ತಡೆದು, ನೊಂದವರಿಗೆ ಶೀಘ್ರ ನ್ಯಾಯ ದೊರಕಿಸಿಕೊಡಲು ಅನುವಾಗುವುದು.

* ಈವರೆಗೆ ಅಪರಾಧ ಪ್ರಕರಣಗಳ ತನಿಖೆಯಲ್ಲಿ ಅನುಸರಿಸುತ್ತಿದ್ದ ಅಪರಾಧಿ ಕೇಂದ್ರಿತ ವ್ಯವಸ್ಥೆಯನ್ನು ಸಂತ್ರಸ್ತ ಕೇಂದ್ರಿತ ವ್ಯವಸ್ಥೆಯ ಪಥವಾಗಿ ಬದಲಿಸಿಕೊಳ್ಳುವುದು. ಇಂತಹ ಕ್ರಮದಿಂದ ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸುವುದರ ಜತೆಗೆ ಸಂತ್ರಸ್ತರಿಗೆ ನ್ಯಾಯ, ಅರ್ಹ ಸವಲತ್ತು ದೊರಕಿಸಿಕೊಡಲು ಮತ್ತು ಅವರನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸಬಹುದಾಗಿದೆ.

* ಪೊಲೀಸ್‌ ಅಧಿಕಾರಿಗಳು ಪ್ರಾಮಾಣಿಕತೆಯಲ್ಲಿ ರಾಜಿಯಾಗಬಾರದು. ಸಹೋದ್ಯೋಗಿಗಳಿಂದ ಎಲ್ಲರ ನಿರೀಕ್ಷೆಯೂ ಇದೇ ಆಗಿದೆ. ತಾವೆಲ್ಲರೂ ಸದಾ ಪ್ರಾಮಾಣಿಕತೆಗೆ ಮೊದಲ ಆದ್ಯತೆ ನೀಡುವಿರಿ ಎಂಬ ವಿಶ್ವಾಸವಿದೆ. ಪ್ರತಿಯೊಂದು ಅಧಿಕೃತ ಪ್ರಕ್ರಿಯೆಗಳಲ್ಲೂ ಪಾರದರ್ಶಕತೆಗೆ ಹೆಚ್ಚು ಒತ್ತು ನೀಡುವುದರಿಂದ ಸಾರ್ವಜನಿಕರಲ್ಲಿ ವಿಶ್ವಾಸಾರ್ಹತೆ ಮೂಡುತ್ತದೆ ಮತ್ತು ದುರ್ಬಲ ವರ್ಗ, ಆರ್ಥಿಕವಾಗಿ ಹಿಂದುಳಿದವರಿಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ. ಇಂತಹ ಪ್ರಾಮಾಣಿಕತೆಯ ಸಿದ್ಧಾಂತಗಳು ನೈತಿಕತೆ ಮತ್ತು ಆತ್ಮತೃಪ್ತಿಯನ್ನು ದ್ವಿಗುಣಗೊಳಿಸುತ್ತವೆ.

* ಉತ್ತಮ ಮಾನವ ಸಂಪನ್ಮೂಲವೇ ಪೊಲೀಸ್‌ ಇಲಾಖೆಯ ಆಸ್ತಿ ಎಂದು ಪರಿಗಣಿಸಲಾಗುತ್ತದೆ. ಸಹೋದ್ಯೋಗಿಗಳು ಸದೃಢರಾಗಿರಲು ಹಾಗೂ ಆರೋಗ್ಯ ಸ್ಥಿತಿ ಹೆಚ್ಚಿಸುವ ಕ್ರಮಗಳನ್ನು ಕೈಗೊಳ್ಳುವುದು. ನಿಯಮಿತ ವ್ಯಾಯಾಮ, ಕೆಲಸದ ಒತ್ತಡ ನಿವಾರಣೆ, ದೀರ್ಘಕಾಲದ ಕರ್ತವ್ಯಗಳ ವಿಭಜನೆ, ಉತ್ತಮ ಕರ್ತವ್ಯದ ವಾತಾವರಣ ನಿರ್ಮಾಣ, ನೈತಿಕ ಉತ್ಸಾಹ ಹೆಚ್ಚಿಸುವ ಕ್ರಮಗಳು, ವಿನಾಕಾರಣ ರಜೆ ನಿರಾಕರಿಸದಿರುವುದು, ಉತ್ತಮ ಸೇವೆ ಗುರುತಿಸಿ ಪುರಸ್ಕರಿಸುವುದರಿಂದ ಅವರು ಪ್ರೇರೇಪಣೆಗೊಂಡು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ. ಸಿಬ್ಬಂದಿಯ ಕುಟುಂಬದ ಕ್ಷೇಮಾಭಿವೃದ್ಧಿಗೆ ಒತ್ತು ನೀಡುವ ಆಚರಣೆಗಳನ್ನು ಹಿರಿಯ ಅಧಿಕಾರಿಗಳು ಆದ್ಯತೆ ಎಂದು ಪರಿಗಣಿಸಬೇಕು.

* ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಪೊಲೀಸರ ಹೊಣೆ ಮತ್ತು ಪ್ರಥಮ ಆದ್ಯತೆ. ಇದಕ್ಕಾಗಿ ಚಾಲ್ತಿಯಲ್ಲಿರುವ ಕಾನೂನಿನ ಪರಿಣಾಮಕಾರಿ ಜಾರಿ, ಅಪರಾಧಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಹಾಗೂ ಸುರಕ್ಷತೆ ವಾತಾವರಣ ನಿರ್ಮಾಣಕ್ಕಾಗಿ ಸಾರ್ವಜನಿಕ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.

* ನಾಡಿನ ಯುವಜನತೆಗೆ ಮಾರಕವಾಗಿರುವ ಮಾದಕವಸ್ತುಗಳ ವಿರುದ್ಧದ ಸಮರ ನಿರಂತರವಾಗಿರಬೇಕು. ರಾಜ್ಯದಲ್ಲಿ ಮಾದಕ ವಸ್ತುಗಳ ಉತ್ಪಾದನೆ, ಸಾಗಣೆ ಹಾಗೂ ಮಾರಾಟಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದರೊಂದಿಗೆ ಮಾದಕ ದ್ರವ್ಯದ ವಿರುದ್ಧ ಆಂದೋಲನಗಳು ಹಾಗೂ ಮದ್ಯ ವ್ಯಸನಕ್ಕೆ ಬಲಿಯಾದ ವ್ಯಕ್ತಿಗಳ ಪುನರ್ವಸತಿ ಕ್ರಮಗಳನ್ನು ಕೈಗೊಳ್ಳುವುದು.

* ಜೂಜಾಟ, ಮಟ್ಕಾ, ವೇಶ್ಯಾವಾಟಿಕೆ ಹಾಗೂ ಎಲ್ಲಾರೀತಿಯ ಅನೈತಿಕ ಚಟುವಟಿಕೆಗಳು ನಾಡಿನ ಯಾವುದೇ ಸ್ಥಳದಲ್ಲಿ ನಡೆಯದಂತೆ ಹದ್ದಿನ ಕಣ್ಣಿಡುವುದು. ರೌಡಿ, ಸಮಾಜಘಾತುಕ ಶಕ್ತಿಗಳು ಹಾಗೂ ಇತರ ಸಂಘಟಿತ ಅಪರಾಧಗಳನ್ನು ತಡೆಯಲು ಕಾನೂನುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು.

* ಇಂದಿನ ತಂತ್ರಜ್ಞಾನ ಯುಗದಲ್ಲಿ ಭೌತಿಕ ಅಪರಾಧಗಳನ್ನು ಹಿಮ್ಮೆಟ್ಟಿಸಿ, ಸೈಬರ್‌ ಅಪರಾಧಗಳ ನಾಗಾಲೋಟವನ್ನು ಸಮರ್ಥವಾಗಿ ತಡೆದು, ವಂಚಿತ ಹಣವು ಸಂತ್ರಸ್ತರಿಗೆ ಶೀಘ್ರವಾಗಿ ತಲುಪುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು.

* ರಸ್ತೆಗಳಲ್ಲಿಉತ್ತಮ ಸಂಚಾರ ನಿರ್ವಹಣೆ ಜಾರಿ ಹಾಗೂ ರಸ್ತೆ ಅಪಘಾತಗಳ ಪರಿಣಾಮಕಾರಿ ನಿಯಂತ್ರಣದಿಂದ ಅಮಾಯಕರ ಜೀವ ಉಳಿಸುವ ಹೊಣೆ ಪೊಲೀಸರ ಮೇಲಿದೆ ಎಂಬುದನ್ನು ಅರಿಯಬೇಕು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

10 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

11 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

16 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

18 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

21 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago