ಸಾಂತ್ವನ ಯೋಜನೆಯಡಿ ದಾಖಲಾಗುವ ಪ್ರಕರಣಗಳನ್ನು ಶೀಘ್ರ ಬಗೆಹರಿಸಿ: ಜಿ.ಪಂ ಸಿಇಒ ಡಾ.ಅನುರಾಧ ಕೆ.ಎನ್

ಸಾಂತ್ವನ ಯೋಜನೆಯಡಿ ದಾಖಲಾಗುವ ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ, ಮುಂತಾದ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಂತ್ವನ ಕೇಂದ್ರಗಳ ಮೇಲ್ವಿಚಾರಣಾ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ಮತ್ತು ಮಾರಾಟ ನಿಷೇಧ ಸಮಿತಿ, ಬಾಲಭವನ ಸೊಸೈಟಿ ಸಮಿತಿ, ವರದಕ್ಷಿಣೆ ನಿಷೇಧ ಕಾಯ್ದೆ ಅಡಿ ಸಮಿತಿಗಳ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೌರ್ಜನ್ಯಕ್ಕೆ ಒಳಪಟ್ಟ ಮಹಿಳೆಯರಿಗೆ ಕಾನೂನು ಸಲಹೆ, ಆರ್ಥಿಕ ನೆರವು ತಾತ್ಕಾಲಿಕ ಆಶ್ರಯ ರಕ್ಷಣೆ ನೀಡುವುದರ ಜೊತೆಗೆ ಸ್ವಯಂ ಪ್ರೇರಣೆಯಿಂದ ಜೀವಿಸಲು ಅನುಕೂಲವಾಗುವಂತೆ ತರಬೇತಿ ನೀಡಬೇಕು. ಅಂತಹ ಮಹಿಳೆಯರಿಗೆ ಸಮಾಜದಲ್ಲಿ ಇತರ ಮಹಿಳೆಯರಂತೆ ಧೈರ್ಯವಾಗಿ ಬದುಕಲು, ಸಶಕ್ತರನ್ನಾಗಿ ಮಾಡಲು ಸಾಂತ್ವನ ಯೋಜನೆ ಅಡಿ ದಾಖಲಾಗಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಬೇಕು ಎಂದರು.

ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆಯನ್ನು ನಿರ್ಮೂಲನೆ ಮಾಡುವುದರ ಜೊತೆಗೆ ಸಾಗಾಣೆಗೆ ಒಳಗಾದವರ, ಶೋಷಣೆಗೆ ಒಳಗಾದವರ ರಕ್ಷಣೆ, ಪುನರ್ವಸತಿ, ಕುಟುಂಬಗಳೊಡನೆ ಪುನಃ ವಿಲೀನಗೊಳಿಸುವ ಸಲುವಾಗಿ ಉಜ್ವಲ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆ ಅಡಿ ದಾಖಲಾಗಿರುವ ಸಂತ್ರಸ್ತ ಮಹಿಳೆಯರು ಮತ್ತು ಮಕ್ಕಳಿಗೆ ಪುನರ್ವಸತಿ ಕಲ್ಪಿಸಿ, ಮರಳಿ ಮನೆಗೆ ತಲುಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.

ವರದಕ್ಷಿಣೆ ನಿಷೇಧ ಕಾಯ್ದೆಯಡಿ ಜಿಲ್ಲೆಯಲ್ಲಿ 2023 ರ ಏಪ್ರಿಲ್ ರಿಂದ ಜೂನ್ ವರೆಗೆ 14 ಪ್ರಕರಣ ದಾಖಲಾಗಿದ್ದು 01 ಪ್ರಕರಣ ಇತ್ಯರ್ಥವಾಗಿದ್ದು, 13 ಪ್ರಕರಣಗಳಿಗೆ ಎಫ್.ಐ‌.ಆರ್ ದಾಖಲಾಗಿ ಚಾರ್ಜ್ ಶೀಟ್ ಸಲ್ಲಿಸುವ ಹಂತದಲ್ಲಿದೆ ಇದರ ಬಗ್ಗೆ ವರದಿ ಅನುಸರಿಸಿ ಮಾಹಿತಿ ನೀಡಿ ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೇಮ, ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

12 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

15 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

16 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

1 day ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago