ಸಾಂತ್ವನ ಯೋಜನೆಯಡಿ ದಾಖಲಾಗುವ ಪ್ರಕರಣಗಳನ್ನು ಶೀಘ್ರ ಬಗೆಹರಿಸಿ: ಜಿ.ಪಂ ಸಿಇಒ ಡಾ.ಅನುರಾಧ ಕೆ.ಎನ್

ಸಾಂತ್ವನ ಯೋಜನೆಯಡಿ ದಾಖಲಾಗುವ ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ, ಮುಂತಾದ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಂತ್ವನ ಕೇಂದ್ರಗಳ ಮೇಲ್ವಿಚಾರಣಾ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ಮತ್ತು ಮಾರಾಟ ನಿಷೇಧ ಸಮಿತಿ, ಬಾಲಭವನ ಸೊಸೈಟಿ ಸಮಿತಿ, ವರದಕ್ಷಿಣೆ ನಿಷೇಧ ಕಾಯ್ದೆ ಅಡಿ ಸಮಿತಿಗಳ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೌರ್ಜನ್ಯಕ್ಕೆ ಒಳಪಟ್ಟ ಮಹಿಳೆಯರಿಗೆ ಕಾನೂನು ಸಲಹೆ, ಆರ್ಥಿಕ ನೆರವು ತಾತ್ಕಾಲಿಕ ಆಶ್ರಯ ರಕ್ಷಣೆ ನೀಡುವುದರ ಜೊತೆಗೆ ಸ್ವಯಂ ಪ್ರೇರಣೆಯಿಂದ ಜೀವಿಸಲು ಅನುಕೂಲವಾಗುವಂತೆ ತರಬೇತಿ ನೀಡಬೇಕು. ಅಂತಹ ಮಹಿಳೆಯರಿಗೆ ಸಮಾಜದಲ್ಲಿ ಇತರ ಮಹಿಳೆಯರಂತೆ ಧೈರ್ಯವಾಗಿ ಬದುಕಲು, ಸಶಕ್ತರನ್ನಾಗಿ ಮಾಡಲು ಸಾಂತ್ವನ ಯೋಜನೆ ಅಡಿ ದಾಖಲಾಗಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಬೇಕು ಎಂದರು.

ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆಯನ್ನು ನಿರ್ಮೂಲನೆ ಮಾಡುವುದರ ಜೊತೆಗೆ ಸಾಗಾಣೆಗೆ ಒಳಗಾದವರ, ಶೋಷಣೆಗೆ ಒಳಗಾದವರ ರಕ್ಷಣೆ, ಪುನರ್ವಸತಿ, ಕುಟುಂಬಗಳೊಡನೆ ಪುನಃ ವಿಲೀನಗೊಳಿಸುವ ಸಲುವಾಗಿ ಉಜ್ವಲ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆ ಅಡಿ ದಾಖಲಾಗಿರುವ ಸಂತ್ರಸ್ತ ಮಹಿಳೆಯರು ಮತ್ತು ಮಕ್ಕಳಿಗೆ ಪುನರ್ವಸತಿ ಕಲ್ಪಿಸಿ, ಮರಳಿ ಮನೆಗೆ ತಲುಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.

ವರದಕ್ಷಿಣೆ ನಿಷೇಧ ಕಾಯ್ದೆಯಡಿ ಜಿಲ್ಲೆಯಲ್ಲಿ 2023 ರ ಏಪ್ರಿಲ್ ರಿಂದ ಜೂನ್ ವರೆಗೆ 14 ಪ್ರಕರಣ ದಾಖಲಾಗಿದ್ದು 01 ಪ್ರಕರಣ ಇತ್ಯರ್ಥವಾಗಿದ್ದು, 13 ಪ್ರಕರಣಗಳಿಗೆ ಎಫ್.ಐ‌.ಆರ್ ದಾಖಲಾಗಿ ಚಾರ್ಜ್ ಶೀಟ್ ಸಲ್ಲಿಸುವ ಹಂತದಲ್ಲಿದೆ ಇದರ ಬಗ್ಗೆ ವರದಿ ಅನುಸರಿಸಿ ಮಾಹಿತಿ ನೀಡಿ ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೇಮ, ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

9 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

9 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

12 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago