ಸಾಂತ್ವನ ಯೋಜನೆಯಡಿ ದಾಖಲಾಗುವ ಪ್ರಕರಣಗಳನ್ನು ಶೀಘ್ರ ಬಗೆಹರಿಸಿ: ಜಿ.ಪಂ ಸಿಇಒ ಡಾ.ಅನುರಾಧ ಕೆ.ಎನ್

ಸಾಂತ್ವನ ಯೋಜನೆಯಡಿ ದಾಖಲಾಗುವ ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ, ಮುಂತಾದ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಂತ್ವನ ಕೇಂದ್ರಗಳ ಮೇಲ್ವಿಚಾರಣಾ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ಮತ್ತು ಮಾರಾಟ ನಿಷೇಧ ಸಮಿತಿ, ಬಾಲಭವನ ಸೊಸೈಟಿ ಸಮಿತಿ, ವರದಕ್ಷಿಣೆ ನಿಷೇಧ ಕಾಯ್ದೆ ಅಡಿ ಸಮಿತಿಗಳ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೌರ್ಜನ್ಯಕ್ಕೆ ಒಳಪಟ್ಟ ಮಹಿಳೆಯರಿಗೆ ಕಾನೂನು ಸಲಹೆ, ಆರ್ಥಿಕ ನೆರವು ತಾತ್ಕಾಲಿಕ ಆಶ್ರಯ ರಕ್ಷಣೆ ನೀಡುವುದರ ಜೊತೆಗೆ ಸ್ವಯಂ ಪ್ರೇರಣೆಯಿಂದ ಜೀವಿಸಲು ಅನುಕೂಲವಾಗುವಂತೆ ತರಬೇತಿ ನೀಡಬೇಕು. ಅಂತಹ ಮಹಿಳೆಯರಿಗೆ ಸಮಾಜದಲ್ಲಿ ಇತರ ಮಹಿಳೆಯರಂತೆ ಧೈರ್ಯವಾಗಿ ಬದುಕಲು, ಸಶಕ್ತರನ್ನಾಗಿ ಮಾಡಲು ಸಾಂತ್ವನ ಯೋಜನೆ ಅಡಿ ದಾಖಲಾಗಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಬೇಕು ಎಂದರು.

ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆಯನ್ನು ನಿರ್ಮೂಲನೆ ಮಾಡುವುದರ ಜೊತೆಗೆ ಸಾಗಾಣೆಗೆ ಒಳಗಾದವರ, ಶೋಷಣೆಗೆ ಒಳಗಾದವರ ರಕ್ಷಣೆ, ಪುನರ್ವಸತಿ, ಕುಟುಂಬಗಳೊಡನೆ ಪುನಃ ವಿಲೀನಗೊಳಿಸುವ ಸಲುವಾಗಿ ಉಜ್ವಲ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆ ಅಡಿ ದಾಖಲಾಗಿರುವ ಸಂತ್ರಸ್ತ ಮಹಿಳೆಯರು ಮತ್ತು ಮಕ್ಕಳಿಗೆ ಪುನರ್ವಸತಿ ಕಲ್ಪಿಸಿ, ಮರಳಿ ಮನೆಗೆ ತಲುಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.

ವರದಕ್ಷಿಣೆ ನಿಷೇಧ ಕಾಯ್ದೆಯಡಿ ಜಿಲ್ಲೆಯಲ್ಲಿ 2023 ರ ಏಪ್ರಿಲ್ ರಿಂದ ಜೂನ್ ವರೆಗೆ 14 ಪ್ರಕರಣ ದಾಖಲಾಗಿದ್ದು 01 ಪ್ರಕರಣ ಇತ್ಯರ್ಥವಾಗಿದ್ದು, 13 ಪ್ರಕರಣಗಳಿಗೆ ಎಫ್.ಐ‌.ಆರ್ ದಾಖಲಾಗಿ ಚಾರ್ಜ್ ಶೀಟ್ ಸಲ್ಲಿಸುವ ಹಂತದಲ್ಲಿದೆ ಇದರ ಬಗ್ಗೆ ವರದಿ ಅನುಸರಿಸಿ ಮಾಹಿತಿ ನೀಡಿ ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೇಮ, ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago