ಸಾಂತ್ವನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ವಿಶೇಷ ದುರ್ಬಲ ವರ್ಗದ ಅಲ್ಪಸಂಖ್ಯಾತ ಫಲಾನುಭವಿಗಳಿಗೆ 5 ಲಕ್ಷ ರೂ. ಗಳ ಘಟಕ ವೆಚ್ಚಕ್ಕೆ ಶೇಕಡ 50 ರಷ್ಟು ಸಹಾಯಧನ ಮತ್ತು ಶೇಕಡ 3ರ ಬಡ್ಡಿ ದರದಲ್ಲಿ ಶೇಕಡ 50ರಷ್ಟು ಸಾಲವನ್ನು ಸಾಂತ್ವನ ಯೋಜನೆ ಅಡಿ ನೀಡಲಾಗುವುದು.

ರಾಜ್ಯದಲ್ಲಿ ಕೋಮುಗಲಭೆ ಮತ್ತು ಕೋಮು ಹಿಂಸಾಚಾರದ ಸಂದರ್ಭಗಳಲ್ಲಿ ಹಾಗೂ ಪರಿಸರ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಹಾಗೂ ವಾಸದ ಮನೆಗಳು ನಾಶ ಅಥವಾ ಹಾನಿಗೊಳಗಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಕನಿಷ್ಠ 2 ಲಕ್ಷ ನಷ್ಟವಾಗಿದ್ದರೆ ಸಾಲ ಸೌಲಭ್ಯ ಒದಗಿಸಲಾಗುವುದು.

ಫಲಾನುಭವಿಯು ಹೊಂದಿರಬೇಕಾದ ಅರ್ಹತೆಗಳು. ಅಲ್ಪಸಂಖ್ಯಾತರಾಗಿರಬೇಕು, ಖಾಯಂ ನಿವಾಸಿ ಆಗಿರಬೇಕು, ಫಲಾನುಭವಿಯ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು, ಕುಟುಂಬದ ವಾರ್ಷಿಕ ಆದಾಯ 8 ಲಕ್ಷಗಳನ್ನು ಮೀರಿರಬಾರದು. ಸಂತ್ರಸ್ತರಾದ ಫಲಾನುಭವಿಗಳು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ ಅಂದರೆ ಜಿಲ್ಲಾಧಿಕಾರಿ, ಆಯುಕ್ತರು, ತಹಸಿಲ್ದಾರ್, ಪೊಲೀಸ್ ಇಲಾಖೆ, ನ್ಯಾಯಾಲಯದ ಆದೇಶ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ವರದಿಯನ್ನು ಪಡೆದಿರತಕ್ಕದ್ದು.

ಅರ್ಜಿದಾರರು ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರಿಯಲ್ಲಿ ಇರಬಾರದು ಅಥವಾ ಅವರ ಕುಟುಂಬದವರು ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಸೌಲಭ್ಯ ಪಡೆದಿರಬಾರದು (ಅರಿವು ಯೋಜನೆ ಹೊರತುಪಡಿಸಿ).

ನಿಗದಿತ ನಮೂನೆ ಅರ್ಜಿ, ಇತ್ತೀಚಿನ ಎರಡು ಪಾಸ್ಪೋರ್ಟ್ ಭಾವಚಿತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ,.ಬ್ಯಾಂಕ್ ಪಾಸ್ ಬುಕ್ ಪ್ರತಿ, ಫಲಾನುಭವಿ ಅಥವಾ ಕುಟುಂಬದ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರ ಅಲ್ಲದ ಬಗ್ಗೆ ಧೃಡೀಕರಣ ಪತ್ರ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ವರದಿಯನ್ನು ಒಳಗೊಂಡ ಅಗತ್ಯ ದಾಖಲೆಗಳೊಂದಿಗೆ  kmdconline.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಬರ್ 1599,  ವೈ.ಎನ್ ಬಿಲ್ಡಿಂಗ್, ಹೊಸ ಬಸ್ ಸ್ಟ್ಯಾಂಡ್ ಹಿಂಭಾಗ ಯಲಹಂಕ ಬೀದಿ, ದೇವನಹಳ್ಳಿ -562110 ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 08027681786, ಸಹಾಯವಾಣಿ ಸಂಖ್ಯೆ 8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

5 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

21 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

22 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago