ಸಾಂತ್ವನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ವಿಶೇಷ ದುರ್ಬಲ ವರ್ಗದ ಅಲ್ಪಸಂಖ್ಯಾತ ಫಲಾನುಭವಿಗಳಿಗೆ 5 ಲಕ್ಷ ರೂ. ಗಳ ಘಟಕ ವೆಚ್ಚಕ್ಕೆ ಶೇಕಡ 50 ರಷ್ಟು ಸಹಾಯಧನ ಮತ್ತು ಶೇಕಡ 3ರ ಬಡ್ಡಿ ದರದಲ್ಲಿ ಶೇಕಡ 50ರಷ್ಟು ಸಾಲವನ್ನು ಸಾಂತ್ವನ ಯೋಜನೆ ಅಡಿ ನೀಡಲಾಗುವುದು.

ರಾಜ್ಯದಲ್ಲಿ ಕೋಮುಗಲಭೆ ಮತ್ತು ಕೋಮು ಹಿಂಸಾಚಾರದ ಸಂದರ್ಭಗಳಲ್ಲಿ ಹಾಗೂ ಪರಿಸರ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಹಾಗೂ ವಾಸದ ಮನೆಗಳು ನಾಶ ಅಥವಾ ಹಾನಿಗೊಳಗಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಕನಿಷ್ಠ 2 ಲಕ್ಷ ನಷ್ಟವಾಗಿದ್ದರೆ ಸಾಲ ಸೌಲಭ್ಯ ಒದಗಿಸಲಾಗುವುದು.

ಫಲಾನುಭವಿಯು ಹೊಂದಿರಬೇಕಾದ ಅರ್ಹತೆಗಳು. ಅಲ್ಪಸಂಖ್ಯಾತರಾಗಿರಬೇಕು, ಖಾಯಂ ನಿವಾಸಿ ಆಗಿರಬೇಕು, ಫಲಾನುಭವಿಯ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು, ಕುಟುಂಬದ ವಾರ್ಷಿಕ ಆದಾಯ 8 ಲಕ್ಷಗಳನ್ನು ಮೀರಿರಬಾರದು. ಸಂತ್ರಸ್ತರಾದ ಫಲಾನುಭವಿಗಳು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ ಅಂದರೆ ಜಿಲ್ಲಾಧಿಕಾರಿ, ಆಯುಕ್ತರು, ತಹಸಿಲ್ದಾರ್, ಪೊಲೀಸ್ ಇಲಾಖೆ, ನ್ಯಾಯಾಲಯದ ಆದೇಶ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ವರದಿಯನ್ನು ಪಡೆದಿರತಕ್ಕದ್ದು.

ಅರ್ಜಿದಾರರು ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರಿಯಲ್ಲಿ ಇರಬಾರದು ಅಥವಾ ಅವರ ಕುಟುಂಬದವರು ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಸೌಲಭ್ಯ ಪಡೆದಿರಬಾರದು (ಅರಿವು ಯೋಜನೆ ಹೊರತುಪಡಿಸಿ).

ನಿಗದಿತ ನಮೂನೆ ಅರ್ಜಿ, ಇತ್ತೀಚಿನ ಎರಡು ಪಾಸ್ಪೋರ್ಟ್ ಭಾವಚಿತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ,.ಬ್ಯಾಂಕ್ ಪಾಸ್ ಬುಕ್ ಪ್ರತಿ, ಫಲಾನುಭವಿ ಅಥವಾ ಕುಟುಂಬದ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರ ಅಲ್ಲದ ಬಗ್ಗೆ ಧೃಡೀಕರಣ ಪತ್ರ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ವರದಿಯನ್ನು ಒಳಗೊಂಡ ಅಗತ್ಯ ದಾಖಲೆಗಳೊಂದಿಗೆ  kmdconline.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಬರ್ 1599,  ವೈ.ಎನ್ ಬಿಲ್ಡಿಂಗ್, ಹೊಸ ಬಸ್ ಸ್ಟ್ಯಾಂಡ್ ಹಿಂಭಾಗ ಯಲಹಂಕ ಬೀದಿ, ದೇವನಹಳ್ಳಿ -562110 ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 08027681786, ಸಹಾಯವಾಣಿ ಸಂಖ್ಯೆ 8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago