ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ವಿಶೇಷ ದುರ್ಬಲ ವರ್ಗದ ಅಲ್ಪಸಂಖ್ಯಾತ ಫಲಾನುಭವಿಗಳಿಗೆ 5 ಲಕ್ಷ ರೂ. ಗಳ ಘಟಕ ವೆಚ್ಚಕ್ಕೆ ಶೇಕಡ 50 ರಷ್ಟು ಸಹಾಯಧನ ಮತ್ತು ಶೇಕಡ 3ರ ಬಡ್ಡಿ ದರದಲ್ಲಿ ಶೇಕಡ 50ರಷ್ಟು ಸಾಲವನ್ನು ಸಾಂತ್ವನ ಯೋಜನೆ ಅಡಿ ನೀಡಲಾಗುವುದು.
ರಾಜ್ಯದಲ್ಲಿ ಕೋಮುಗಲಭೆ ಮತ್ತು ಕೋಮು ಹಿಂಸಾಚಾರದ ಸಂದರ್ಭಗಳಲ್ಲಿ ಹಾಗೂ ಪರಿಸರ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಹಾಗೂ ವಾಸದ ಮನೆಗಳು ನಾಶ ಅಥವಾ ಹಾನಿಗೊಳಗಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಕನಿಷ್ಠ 2 ಲಕ್ಷ ನಷ್ಟವಾಗಿದ್ದರೆ ಸಾಲ ಸೌಲಭ್ಯ ಒದಗಿಸಲಾಗುವುದು.
ಫಲಾನುಭವಿಯು ಹೊಂದಿರಬೇಕಾದ ಅರ್ಹತೆಗಳು. ಅಲ್ಪಸಂಖ್ಯಾತರಾಗಿರಬೇಕು, ಖಾಯಂ ನಿವಾಸಿ ಆಗಿರಬೇಕು, ಫಲಾನುಭವಿಯ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು, ಕುಟುಂಬದ ವಾರ್ಷಿಕ ಆದಾಯ 8 ಲಕ್ಷಗಳನ್ನು ಮೀರಿರಬಾರದು. ಸಂತ್ರಸ್ತರಾದ ಫಲಾನುಭವಿಗಳು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ ಅಂದರೆ ಜಿಲ್ಲಾಧಿಕಾರಿ, ಆಯುಕ್ತರು, ತಹಸಿಲ್ದಾರ್, ಪೊಲೀಸ್ ಇಲಾಖೆ, ನ್ಯಾಯಾಲಯದ ಆದೇಶ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ವರದಿಯನ್ನು ಪಡೆದಿರತಕ್ಕದ್ದು.
ಅರ್ಜಿದಾರರು ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರಿಯಲ್ಲಿ ಇರಬಾರದು ಅಥವಾ ಅವರ ಕುಟುಂಬದವರು ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಸೌಲಭ್ಯ ಪಡೆದಿರಬಾರದು (ಅರಿವು ಯೋಜನೆ ಹೊರತುಪಡಿಸಿ).
ನಿಗದಿತ ನಮೂನೆ ಅರ್ಜಿ, ಇತ್ತೀಚಿನ ಎರಡು ಪಾಸ್ಪೋರ್ಟ್ ಭಾವಚಿತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ,.ಬ್ಯಾಂಕ್ ಪಾಸ್ ಬುಕ್ ಪ್ರತಿ, ಫಲಾನುಭವಿ ಅಥವಾ ಕುಟುಂಬದ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರ ಅಲ್ಲದ ಬಗ್ಗೆ ಧೃಡೀಕರಣ ಪತ್ರ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ವರದಿಯನ್ನು ಒಳಗೊಂಡ ಅಗತ್ಯ ದಾಖಲೆಗಳೊಂದಿಗೆ kmdconline.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಬರ್ 1599, ವೈ.ಎನ್ ಬಿಲ್ಡಿಂಗ್, ಹೊಸ ಬಸ್ ಸ್ಟ್ಯಾಂಡ್ ಹಿಂಭಾಗ ಯಲಹಂಕ ಬೀದಿ, ದೇವನಹಳ್ಳಿ -562110 ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 08027681786, ಸಹಾಯವಾಣಿ ಸಂಖ್ಯೆ 8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…