ಸಾಂತ್ವನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ವಿಶೇಷ ದುರ್ಬಲ ವರ್ಗದ ಅಲ್ಪಸಂಖ್ಯಾತ ಫಲಾನುಭವಿಗಳಿಗೆ 5 ಲಕ್ಷ ರೂ. ಗಳ ಘಟಕ ವೆಚ್ಚಕ್ಕೆ ಶೇಕಡ 50 ರಷ್ಟು ಸಹಾಯಧನ ಮತ್ತು ಶೇಕಡ 3ರ ಬಡ್ಡಿ ದರದಲ್ಲಿ ಶೇಕಡ 50ರಷ್ಟು ಸಾಲವನ್ನು ಸಾಂತ್ವನ ಯೋಜನೆ ಅಡಿ ನೀಡಲಾಗುವುದು.

ರಾಜ್ಯದಲ್ಲಿ ಕೋಮುಗಲಭೆ ಮತ್ತು ಕೋಮು ಹಿಂಸಾಚಾರದ ಸಂದರ್ಭಗಳಲ್ಲಿ ಹಾಗೂ ಪರಿಸರ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಹಾಗೂ ವಾಸದ ಮನೆಗಳು ನಾಶ ಅಥವಾ ಹಾನಿಗೊಳಗಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಕನಿಷ್ಠ 2 ಲಕ್ಷ ನಷ್ಟವಾಗಿದ್ದರೆ ಸಾಲ ಸೌಲಭ್ಯ ಒದಗಿಸಲಾಗುವುದು.

ಫಲಾನುಭವಿಯು ಹೊಂದಿರಬೇಕಾದ ಅರ್ಹತೆಗಳು. ಅಲ್ಪಸಂಖ್ಯಾತರಾಗಿರಬೇಕು, ಖಾಯಂ ನಿವಾಸಿ ಆಗಿರಬೇಕು, ಫಲಾನುಭವಿಯ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು, ಕುಟುಂಬದ ವಾರ್ಷಿಕ ಆದಾಯ 8 ಲಕ್ಷಗಳನ್ನು ಮೀರಿರಬಾರದು. ಸಂತ್ರಸ್ತರಾದ ಫಲಾನುಭವಿಗಳು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ ಅಂದರೆ ಜಿಲ್ಲಾಧಿಕಾರಿ, ಆಯುಕ್ತರು, ತಹಸಿಲ್ದಾರ್, ಪೊಲೀಸ್ ಇಲಾಖೆ, ನ್ಯಾಯಾಲಯದ ಆದೇಶ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ವರದಿಯನ್ನು ಪಡೆದಿರತಕ್ಕದ್ದು.

ಅರ್ಜಿದಾರರು ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರಿಯಲ್ಲಿ ಇರಬಾರದು ಅಥವಾ ಅವರ ಕುಟುಂಬದವರು ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಸೌಲಭ್ಯ ಪಡೆದಿರಬಾರದು (ಅರಿವು ಯೋಜನೆ ಹೊರತುಪಡಿಸಿ).

ನಿಗದಿತ ನಮೂನೆ ಅರ್ಜಿ, ಇತ್ತೀಚಿನ ಎರಡು ಪಾಸ್ಪೋರ್ಟ್ ಭಾವಚಿತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ,.ಬ್ಯಾಂಕ್ ಪಾಸ್ ಬುಕ್ ಪ್ರತಿ, ಫಲಾನುಭವಿ ಅಥವಾ ಕುಟುಂಬದ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರ ಅಲ್ಲದ ಬಗ್ಗೆ ಧೃಡೀಕರಣ ಪತ್ರ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ವರದಿಯನ್ನು ಒಳಗೊಂಡ ಅಗತ್ಯ ದಾಖಲೆಗಳೊಂದಿಗೆ  kmdconline.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಬರ್ 1599,  ವೈ.ಎನ್ ಬಿಲ್ಡಿಂಗ್, ಹೊಸ ಬಸ್ ಸ್ಟ್ಯಾಂಡ್ ಹಿಂಭಾಗ ಯಲಹಂಕ ಬೀದಿ, ದೇವನಹಳ್ಳಿ -562110 ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 08027681786, ಸಹಾಯವಾಣಿ ಸಂಖ್ಯೆ 8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

3 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

3 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

15 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

17 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

17 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

18 hours ago