ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭ:ಕಾರ್ಯಕ್ರಮ ಮುಂದೂಡುವಂತೆ ನಿತಿನ್ ಗಡ್ಕರಿಗೆ ಸಿಎಂ ಪತ್ರ

 

ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಿ, ಬೇರೊಂದು ದಿನ ಆಯೋಜಿಸಬೇಕು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಸಚಿವರಾದ ನಿತಿನ್ ಗಡ್ಕರಿ (Nitin Gadkari) ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಪತ್ರದ ಸಾರಾಂಶ ಇಂತಿದೆ;

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆ ಸಾಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹಾ ಮುದ್ರಿಸಲಾಗಿದೆ. ಆದರೆ ನನಗೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದ ಕಾರಣದಿಂದ ಈಗಾಗಲೇ ನನ್ನ‌ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯು ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಗೆ ಮುನ್ನ ರಾಜ್ಯ ಸರ್ಕಾರವನ್ನು ಮುಂಚಿತವಾಗಿಯೇ ಸಂಪರ್ಕಿಸಿದ್ದರೆ ಮತ್ತಷ್ಟು ಸಮರ್ಪಕವಾಗಿರುತ್ತಿತ್ತು. ಮುಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಸಕಾಲದಲ್ಲಿ ಸಂಪರ್ಕಿಸುವಂತೆ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇನೆ.

ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ನಿಮಗೆ ಅನುಕೂಲವಾಗುವ ಒಂದೆರೆಡು ದಿನಾಂಕಗಳನ್ನು ನನಗೆ ಒದಗಿಸಬೇಕೆಂದು ಕೋರುತ್ತೇನೆ. ಆ ಮೂಲಕ ಇಂಥದ್ದೊಂದು ಮಹತ್ವದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸಲು ಸಾಧ್ಯವಾಗಲಿದೆ ಎಂದು ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

4 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

4 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

10 hours ago