ಸಾಗುವಳಿ ಚೀಟಿ, ಹಕ್ಕುಪತ್ರಗಳ ವಿತರಣೆ, ಸ್ಮಶಾನ ಭೂಮಿ ಮಂಜೂರು ಸೇರಿದಂತೆ ಇತರೆ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ- ಬಿಎಎಸ್ ಪಿ ರಾಜ್ಯ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಒತ್ತಾಯ

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದರೂ ಅಸ್ಪೃಶ್ಯತೆ, ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಇಲ್ಲಿಯವರೆಗೂ ಆಡಳಿತ ನಡೆಸಿರುವ ಯಾರೊಬ್ಬರು ಜಾರಿಗೆ ತಂದಿಲ್ಲ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿಕೊಟ್ಟಿರುವ ಸಂವಿಧಾನವನ್ನು ಯಥಾವತ್ತಾಗಿ ಜಾರಿ ಮಾಡುವಲ್ಲಿ ವಿಫಲವಾಗಿರುವುದೇ ದೇಶದಲ್ಲಿ ಬಡವರು ಇನ್ನೂ ಬಡವರಾಗಿಯೇ ಉಳಿಯುವಂತಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಸಾಗುವಳಿ ಚೀಟಿ, ಹಕ್ಕುಪತ್ರಗಳ ವಿತರಣೆ, ಸ್ಮಶಾನ ಭೂಮಿ ಮಂಜೂರು ಮೊದಲಾದ ಬಹುಜನ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷದ ನೇತೃತ್ವದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿತ್ತು.

ನಗರದ ಪ್ರವಾಸಿ ಮಂದಿರ ವೃತ್ತದ ಬಳಿಯಿಂದ ತಾಲೂಕು ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಸಮಾನತೆಯ ಭರವಸೆಗಳು ಭಾಷಣಕ್ಕೆ ಮಾತ್ರವೇ ಸೀಮಿತವಾಗಿದ್ದು, ಇಂದಿಗೂ ಅಲ್ಪ ಸಂಖ್ಯಾತ ಉನ್ನತ ವರ್ಗದವರ ಕೈಯಲ್ಲಿ ವ್ಯವಸ್ಥೆ ಸಿಲುಕಿದೆ ಎಂದರು.

ದೇಶದ ಬಹಳಷ್ಟು ಬಡಜನತೆ ಇಂದಿಗೂ ಸೂರು ಹಾಗೂ ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸಬೇಕಿದೆ. ಈ ದಿಸೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಎಸ್.ಸಿ/ಎಸ್.ಟಿ ಹಿಂದುಳಿದವರು, ಧಾರ್ಮಿಕ ಅಲ್ಪಾಸಂಖ್ಯಾತರು ಬಹುಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಲಾಗುತ್ತಿದ್ದು, ಈ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ 35ರಿಂದ 40 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ವಿತರಿಸಬೇಕು. ಬಡ ಕುಟುಂಬಗಳಿಗೆ ಹಕ್ಕುಪತ್ರಳನ್ನು ವಿತರಿಸಬೇಕು. ಜಿಲ್ಲೆಯಲ್ಲಿ  ಬಡ ಕುಟುಂಬಗಳಿಗೆ ಶೇ.50ರಷ್ಟು ಸ್ಮಶಾನಗಳ ಕೊರತೆಯಿದ್ದು, ಸ್ಮಶಾನ ಮಂಜೂರು ಮಾಡಬೇಕು. ಸರ್ವೆ, ಪೋಡಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಪಿಟಿಸಿಎಲ್ ಕಾಯ್ದೆ ಅನ್ವಯ ಪರಭಾರೆಯಾಗಿರುವ ಜಮೀನುಗಳ ಪ್ರಕರಣಗಳನ್ನು 6 ತಿಂಗಳೊಳಗೆ ಇತ್ಯರ್ಥಪಡಿಸಬೇಕು. ಎಸ್.ಸಿ,ಎಸ್.ಟಿ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು, ದೌರ್ಜನ್ಯಕ್ಕೊಳಗಾದ ಕುಟುಂಬಗಳಿಗೆ ಪರಿಹಾರ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.

ನಿವೇಶನರಹಿತರಿಗೆ ನಿವೇಶನ ಮಂಜೂರು ಮಾಡಬೇಕು. ನಿರುದ್ಯೋಗಳಿಗೆ ಮಾಸಿಕ ₹5 ಸಾವಿರ ಭತ್ಯೆನೀಡಬೇಕು. ಜನರಿಗೆ ಗ್ರಾಮ ಪಂಚಾಯಿತಿ , ಸ್ಥಳೀಯ ಆಡಳಿತಗಳು ಮೂಲಕ ಸೌಕರ್ಯಗಳನ್ನು ಒದಗಿಸಬೇಕು. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಎಸ್.ಸಿ, ಎಸ್.ಟಿ ಜಾತಿಯ ಸುಳ್ಳು ಪ್ರಮಾಣ ಪತ್ರಗಳನ್ನು ಪಡೆದು ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಿರುವವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕು ಎನ್ನುವ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.

ಪ್ರತಿಭಟನೆಯಲ್ಲಿ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಮುನಿಯಪ್ಪ, ಕಾರ್ಯದರ್ಶಿಗಳಾದ ಗೂಳ್ಯ ವೆಂಕಟೇಶ್, ನಂದಿಗುಂದ ಪಿ.ವೆಂಕಟೇಶ್, ಕತ್ತರಗುಪ್ಪೆ ರಮೇಶ್, ನಾಗರಾಜ್, ಪದ್ಮರಾಜ್,  ಜಿಲ್ಲಾ ಘಟಕದ ಅಧ್ಯಕ್ಷ ಪಿ.ಮಹದೇವ್, ಜಿಲ್ಲಾ ಸಂಯೋಜಕ ಎಚ್.ನರಸಿಂಹಯ್ಯ, ಬಿ.ಎಲ್.ರಾಜಪ್ಪ,ಗೋವಿಂದರಾಜು,  ಜಿಲ್ಲಾ ಕಾರ್ಯದರ್ಶಿ ದೇವಪ್ಪ, ನರಸಿಂಹ, ಉಪಾಧ್ಯಕ್ಷ ನಾಗರಾಜ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿಳ್ಳಪ್ಪ, ದೇವನಹಳ್ಳಿ ಘಟಕದ ಅಧ್ಯಕ್ಷ ನಾಗರಾಜ್, ಹೊಕೋಟೆ ಅಧ್ಯಕ್ಷೆ ಲಕ್ಷ್ಮೀನಾರಾಯಣ, ನೆಲಮಂಗಲ ಅಧ್ಯಕ್ಷ ಶ್ರೀನಿವಾಸ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

8 minutes ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

19 minutes ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

1 hour ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

8 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

9 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

12 hours ago