ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದರೂ ಅಸ್ಪೃಶ್ಯತೆ, ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಇಲ್ಲಿಯವರೆಗೂ ಆಡಳಿತ ನಡೆಸಿರುವ ಯಾರೊಬ್ಬರು ಜಾರಿಗೆ ತಂದಿಲ್ಲ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿಕೊಟ್ಟಿರುವ ಸಂವಿಧಾನವನ್ನು ಯಥಾವತ್ತಾಗಿ ಜಾರಿ ಮಾಡುವಲ್ಲಿ ವಿಫಲವಾಗಿರುವುದೇ ದೇಶದಲ್ಲಿ ಬಡವರು ಇನ್ನೂ ಬಡವರಾಗಿಯೇ ಉಳಿಯುವಂತಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಬಹಳಷ್ಟು ಬಡಜನತೆ ಇಂದಿಗೂ ಸೂರು ಹಾಗೂ ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸಬೇಕಿದೆ. ಈ ದಿಸೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಎಸ್.ಸಿ/ಎಸ್.ಟಿ ಹಿಂದುಳಿದವರು, ಧಾರ್ಮಿಕ ಅಲ್ಪಾಸಂಖ್ಯಾತರು ಬಹುಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಲಾಗುತ್ತಿದ್ದು, ಈ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ 35ರಿಂದ 40 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ವಿತರಿಸಬೇಕು. ಬಡ ಕುಟುಂಬಗಳಿಗೆ ಹಕ್ಕುಪತ್ರಳನ್ನು ವಿತರಿಸಬೇಕು. ಜಿಲ್ಲೆಯಲ್ಲಿ ಬಡ ಕುಟುಂಬಗಳಿಗೆ ಶೇ.50ರಷ್ಟು ಸ್ಮಶಾನಗಳ ಕೊರತೆಯಿದ್ದು, ಸ್ಮಶಾನ ಮಂಜೂರು ಮಾಡಬೇಕು. ಸರ್ವೆ, ಪೋಡಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ನಿವೇಶನರಹಿತರಿಗೆ ನಿವೇಶನ ಮಂಜೂರು ಮಾಡಬೇಕು. ನಿರುದ್ಯೋಗಳಿಗೆ ಮಾಸಿಕ ₹5 ಸಾವಿರ ಭತ್ಯೆನೀಡಬೇಕು. ಜನರಿಗೆ ಗ್ರಾಮ ಪಂಚಾಯಿತಿ , ಸ್ಥಳೀಯ ಆಡಳಿತಗಳು ಮೂಲಕ ಸೌಕರ್ಯಗಳನ್ನು ಒದಗಿಸಬೇಕು. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಎಸ್.ಸಿ, ಎಸ್.ಟಿ ಜಾತಿಯ ಸುಳ್ಳು ಪ್ರಮಾಣ ಪತ್ರಗಳನ್ನು ಪಡೆದು ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಿರುವವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕು ಎನ್ನುವ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…