ಸಾಗುವಳಿ ಚೀಟಿ, ಹಕ್ಕುಪತ್ರಗಳ ವಿತರಣೆ, ಸ್ಮಶಾನ ಭೂಮಿ ಮಂಜೂರು ಸೇರಿದಂತೆ ಇತರೆ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ- ಬಿಎಎಸ್ ಪಿ ರಾಜ್ಯ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಒತ್ತಾಯ

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದರೂ ಅಸ್ಪೃಶ್ಯತೆ, ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಇಲ್ಲಿಯವರೆಗೂ ಆಡಳಿತ ನಡೆಸಿರುವ ಯಾರೊಬ್ಬರು ಜಾರಿಗೆ ತಂದಿಲ್ಲ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿಕೊಟ್ಟಿರುವ ಸಂವಿಧಾನವನ್ನು ಯಥಾವತ್ತಾಗಿ ಜಾರಿ ಮಾಡುವಲ್ಲಿ ವಿಫಲವಾಗಿರುವುದೇ ದೇಶದಲ್ಲಿ ಬಡವರು ಇನ್ನೂ ಬಡವರಾಗಿಯೇ ಉಳಿಯುವಂತಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಸಾಗುವಳಿ ಚೀಟಿ, ಹಕ್ಕುಪತ್ರಗಳ ವಿತರಣೆ, ಸ್ಮಶಾನ ಭೂಮಿ ಮಂಜೂರು ಮೊದಲಾದ ಬಹುಜನ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷದ ನೇತೃತ್ವದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿತ್ತು.

ನಗರದ ಪ್ರವಾಸಿ ಮಂದಿರ ವೃತ್ತದ ಬಳಿಯಿಂದ ತಾಲೂಕು ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಸಮಾನತೆಯ ಭರವಸೆಗಳು ಭಾಷಣಕ್ಕೆ ಮಾತ್ರವೇ ಸೀಮಿತವಾಗಿದ್ದು, ಇಂದಿಗೂ ಅಲ್ಪ ಸಂಖ್ಯಾತ ಉನ್ನತ ವರ್ಗದವರ ಕೈಯಲ್ಲಿ ವ್ಯವಸ್ಥೆ ಸಿಲುಕಿದೆ ಎಂದರು.

ದೇಶದ ಬಹಳಷ್ಟು ಬಡಜನತೆ ಇಂದಿಗೂ ಸೂರು ಹಾಗೂ ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸಬೇಕಿದೆ. ಈ ದಿಸೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಎಸ್.ಸಿ/ಎಸ್.ಟಿ ಹಿಂದುಳಿದವರು, ಧಾರ್ಮಿಕ ಅಲ್ಪಾಸಂಖ್ಯಾತರು ಬಹುಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಲಾಗುತ್ತಿದ್ದು, ಈ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ 35ರಿಂದ 40 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ವಿತರಿಸಬೇಕು. ಬಡ ಕುಟುಂಬಗಳಿಗೆ ಹಕ್ಕುಪತ್ರಳನ್ನು ವಿತರಿಸಬೇಕು. ಜಿಲ್ಲೆಯಲ್ಲಿ  ಬಡ ಕುಟುಂಬಗಳಿಗೆ ಶೇ.50ರಷ್ಟು ಸ್ಮಶಾನಗಳ ಕೊರತೆಯಿದ್ದು, ಸ್ಮಶಾನ ಮಂಜೂರು ಮಾಡಬೇಕು. ಸರ್ವೆ, ಪೋಡಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಪಿಟಿಸಿಎಲ್ ಕಾಯ್ದೆ ಅನ್ವಯ ಪರಭಾರೆಯಾಗಿರುವ ಜಮೀನುಗಳ ಪ್ರಕರಣಗಳನ್ನು 6 ತಿಂಗಳೊಳಗೆ ಇತ್ಯರ್ಥಪಡಿಸಬೇಕು. ಎಸ್.ಸಿ,ಎಸ್.ಟಿ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು, ದೌರ್ಜನ್ಯಕ್ಕೊಳಗಾದ ಕುಟುಂಬಗಳಿಗೆ ಪರಿಹಾರ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.

ನಿವೇಶನರಹಿತರಿಗೆ ನಿವೇಶನ ಮಂಜೂರು ಮಾಡಬೇಕು. ನಿರುದ್ಯೋಗಳಿಗೆ ಮಾಸಿಕ ₹5 ಸಾವಿರ ಭತ್ಯೆನೀಡಬೇಕು. ಜನರಿಗೆ ಗ್ರಾಮ ಪಂಚಾಯಿತಿ , ಸ್ಥಳೀಯ ಆಡಳಿತಗಳು ಮೂಲಕ ಸೌಕರ್ಯಗಳನ್ನು ಒದಗಿಸಬೇಕು. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಎಸ್.ಸಿ, ಎಸ್.ಟಿ ಜಾತಿಯ ಸುಳ್ಳು ಪ್ರಮಾಣ ಪತ್ರಗಳನ್ನು ಪಡೆದು ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಿರುವವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕು ಎನ್ನುವ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.

ಪ್ರತಿಭಟನೆಯಲ್ಲಿ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಮುನಿಯಪ್ಪ, ಕಾರ್ಯದರ್ಶಿಗಳಾದ ಗೂಳ್ಯ ವೆಂಕಟೇಶ್, ನಂದಿಗುಂದ ಪಿ.ವೆಂಕಟೇಶ್, ಕತ್ತರಗುಪ್ಪೆ ರಮೇಶ್, ನಾಗರಾಜ್, ಪದ್ಮರಾಜ್,  ಜಿಲ್ಲಾ ಘಟಕದ ಅಧ್ಯಕ್ಷ ಪಿ.ಮಹದೇವ್, ಜಿಲ್ಲಾ ಸಂಯೋಜಕ ಎಚ್.ನರಸಿಂಹಯ್ಯ, ಬಿ.ಎಲ್.ರಾಜಪ್ಪ,ಗೋವಿಂದರಾಜು,  ಜಿಲ್ಲಾ ಕಾರ್ಯದರ್ಶಿ ದೇವಪ್ಪ, ನರಸಿಂಹ, ಉಪಾಧ್ಯಕ್ಷ ನಾಗರಾಜ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿಳ್ಳಪ್ಪ, ದೇವನಹಳ್ಳಿ ಘಟಕದ ಅಧ್ಯಕ್ಷ ನಾಗರಾಜ್, ಹೊಕೋಟೆ ಅಧ್ಯಕ್ಷೆ ಲಕ್ಷ್ಮೀನಾರಾಯಣ, ನೆಲಮಂಗಲ ಅಧ್ಯಕ್ಷ ಶ್ರೀನಿವಾಸ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

7 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago