Categories: ಕೋಲಾರ

ಸಾಣೆಹಳ್ಳಿ ಮಠದಲ್ಲಿ ನಡೆದ ಚುನಾವಣೆ ಸುಧಾರಣೆ ಕಾರ್ಯಾಗಾರ

ಕೋಲಾರ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಎರಡು ದಿನಗಳ ಚುನಾವಣಾ ಸುಧಾರಣೆಯ ಕಾರ್ಯಾಗಾರದಲ್ಲಿ ಕೋಲಾರದ ಜಿಲ್ಲೆಯಿಂದ ಮಾಜಿ ಸಭಾಪತಿ ವಿ ಆರ್.ಸುದರ್ಶನ್ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಪಕ್ಷದ ಅಭ್ಯರ್ಥಿ ಕಲ್ಲಂಡೂರು ಡಾ ಕೆ.ನಾಗರಾಜ್ ಭಾಗವಹಿಸಿದ್ದರು

ಕಾರ್ಯಾಗಾರದಲ್ಲಿ ಮುಂಬರುವ ಚುನಾವಣೆಗಳು ಪಾರದರ್ಶಕತೆ, ಭ್ರಷ್ಟಾಚಾರ ರಹಿತ ಹಣ ಮತ್ತು ಹೆಂಡ ಹಂಚದೆ ಚುನಾವಣೆ ನಡೆಯಬೇಕು, ಕಡ್ಡಾಯ ಮತದಾನ, ಉತ್ತಮ ಶಿಕ್ಷಣ, ಆರೋಗ್ಯ, ಸಾವಯವ ಕೃಷಿ, ಪರಿಸರಕ್ಕೆ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು ಎಂದು ನಿರ್ಧರಿಸಲಾಯಿತು ಇದೇ ಸಂದರ್ಭದಲ್ಲಿ ಸರ್ವೋದಯ ( ಶಿಕ್ಷಣ,ಆರೋಗ್ಯ, ಕೃಷಿ, ಆಡಳಿತ, ಪರಿಸರ ) ಸಂಘಟನೆಯ ರೂಪುರೇಷೆಗಳ ಬಗ್ಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಂಘಟನೆಗೆ ಒತ್ತು ನೀಡಲು ಕಾರ್ಯಾಗಾರದಲ್ಲಿ ತೀರ್ಮಾನಿಸಲಾಯಿತು.

ಕಾರ್ಯಾಗಾರದಲ್ಲಿ ಬಂದಿಮಟ್ಟಿ ಸ್ವಾಮೀಜಿ, ಕುಂಬಾರ ಗುಂಡಯ್ಯ ಸ್ವಾಮೀಜಿ, ಮಾಜಿ ಶಾಸಕ ಮಹಿಮ ಜೆ ಪಟೇಲ್, ಅಳಂದ ಶಾಸಕ ಬಿ.ಆರ್ ಪಾಟೀಲ್, ಹೊಸದುರ್ಗ ಶಾಸಕ ಗೋವಿಂದಪ್ಪ, ಮಾಜಿ ಸಭಾಪತಿ ಬಿ.ಎಲ್ ಶಂಕರ್, ಮಾಜಿ ಶಾಸಕರಾದ ಎ.ಟಿ ರಾಮಸ್ವಾಮಿ, ಮುಖ್ಯಮಂತ್ರಿ ಚಂದ್ರು, ವೈ.ಎಸ್.ವಿ ದತ್ತ, ಎಂಪಿ ನಾಡಗೌಡ, ಕೆ.ಆರ್.ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ, ಪಾಣಿ ಪಟೇಲ್, ತೇಜಸ್ವಿ ಪಟೇಲ್, ಬಿಜೆಪಿ ಮುಖಂಡರಾದ ಸಿಂಧೂರಮೇಶ್, ಬೈರೇಗೌಡ, ಅನೇಕ ರೈತ ಮುಖಂಡರು, ನಿವೃತ್ತ ನ್ಯಾಯಾಧೀಶರು, ವೈದ್ಯರು, ಶಿಕ್ಷಣ ತಜ್ಞರು, ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

4 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

4 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

8 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

9 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

15 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

16 hours ago