ಕೋಲಾರ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಎರಡು ದಿನಗಳ ಚುನಾವಣಾ ಸುಧಾರಣೆಯ ಕಾರ್ಯಾಗಾರದಲ್ಲಿ ಕೋಲಾರದ ಜಿಲ್ಲೆಯಿಂದ ಮಾಜಿ ಸಭಾಪತಿ ವಿ ಆರ್.ಸುದರ್ಶನ್ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಪಕ್ಷದ ಅಭ್ಯರ್ಥಿ ಕಲ್ಲಂಡೂರು ಡಾ ಕೆ.ನಾಗರಾಜ್ ಭಾಗವಹಿಸಿದ್ದರು
ಕಾರ್ಯಾಗಾರದಲ್ಲಿ ಮುಂಬರುವ ಚುನಾವಣೆಗಳು ಪಾರದರ್ಶಕತೆ, ಭ್ರಷ್ಟಾಚಾರ ರಹಿತ ಹಣ ಮತ್ತು ಹೆಂಡ ಹಂಚದೆ ಚುನಾವಣೆ ನಡೆಯಬೇಕು, ಕಡ್ಡಾಯ ಮತದಾನ, ಉತ್ತಮ ಶಿಕ್ಷಣ, ಆರೋಗ್ಯ, ಸಾವಯವ ಕೃಷಿ, ಪರಿಸರಕ್ಕೆ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು ಎಂದು ನಿರ್ಧರಿಸಲಾಯಿತು ಇದೇ ಸಂದರ್ಭದಲ್ಲಿ ಸರ್ವೋದಯ ( ಶಿಕ್ಷಣ,ಆರೋಗ್ಯ, ಕೃಷಿ, ಆಡಳಿತ, ಪರಿಸರ ) ಸಂಘಟನೆಯ ರೂಪುರೇಷೆಗಳ ಬಗ್ಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಂಘಟನೆಗೆ ಒತ್ತು ನೀಡಲು ಕಾರ್ಯಾಗಾರದಲ್ಲಿ ತೀರ್ಮಾನಿಸಲಾಯಿತು.
ಕಾರ್ಯಾಗಾರದಲ್ಲಿ ಬಂದಿಮಟ್ಟಿ ಸ್ವಾಮೀಜಿ, ಕುಂಬಾರ ಗುಂಡಯ್ಯ ಸ್ವಾಮೀಜಿ, ಮಾಜಿ ಶಾಸಕ ಮಹಿಮ ಜೆ ಪಟೇಲ್, ಅಳಂದ ಶಾಸಕ ಬಿ.ಆರ್ ಪಾಟೀಲ್, ಹೊಸದುರ್ಗ ಶಾಸಕ ಗೋವಿಂದಪ್ಪ, ಮಾಜಿ ಸಭಾಪತಿ ಬಿ.ಎಲ್ ಶಂಕರ್, ಮಾಜಿ ಶಾಸಕರಾದ ಎ.ಟಿ ರಾಮಸ್ವಾಮಿ, ಮುಖ್ಯಮಂತ್ರಿ ಚಂದ್ರು, ವೈ.ಎಸ್.ವಿ ದತ್ತ, ಎಂಪಿ ನಾಡಗೌಡ, ಕೆ.ಆರ್.ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ, ಪಾಣಿ ಪಟೇಲ್, ತೇಜಸ್ವಿ ಪಟೇಲ್, ಬಿಜೆಪಿ ಮುಖಂಡರಾದ ಸಿಂಧೂರಮೇಶ್, ಬೈರೇಗೌಡ, ಅನೇಕ ರೈತ ಮುಖಂಡರು, ನಿವೃತ್ತ ನ್ಯಾಯಾಧೀಶರು, ವೈದ್ಯರು, ಶಿಕ್ಷಣ ತಜ್ಞರು, ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…