ಕೋಲಾರ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಎರಡು ದಿನಗಳ ಚುನಾವಣಾ ಸುಧಾರಣೆಯ ಕಾರ್ಯಾಗಾರದಲ್ಲಿ ಕೋಲಾರದ ಜಿಲ್ಲೆಯಿಂದ ಮಾಜಿ ಸಭಾಪತಿ ವಿ ಆರ್.ಸುದರ್ಶನ್ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಪಕ್ಷದ ಅಭ್ಯರ್ಥಿ ಕಲ್ಲಂಡೂರು ಡಾ ಕೆ.ನಾಗರಾಜ್ ಭಾಗವಹಿಸಿದ್ದರು
ಕಾರ್ಯಾಗಾರದಲ್ಲಿ ಮುಂಬರುವ ಚುನಾವಣೆಗಳು ಪಾರದರ್ಶಕತೆ, ಭ್ರಷ್ಟಾಚಾರ ರಹಿತ ಹಣ ಮತ್ತು ಹೆಂಡ ಹಂಚದೆ ಚುನಾವಣೆ ನಡೆಯಬೇಕು, ಕಡ್ಡಾಯ ಮತದಾನ, ಉತ್ತಮ ಶಿಕ್ಷಣ, ಆರೋಗ್ಯ, ಸಾವಯವ ಕೃಷಿ, ಪರಿಸರಕ್ಕೆ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು ಎಂದು ನಿರ್ಧರಿಸಲಾಯಿತು ಇದೇ ಸಂದರ್ಭದಲ್ಲಿ ಸರ್ವೋದಯ ( ಶಿಕ್ಷಣ,ಆರೋಗ್ಯ, ಕೃಷಿ, ಆಡಳಿತ, ಪರಿಸರ ) ಸಂಘಟನೆಯ ರೂಪುರೇಷೆಗಳ ಬಗ್ಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಂಘಟನೆಗೆ ಒತ್ತು ನೀಡಲು ಕಾರ್ಯಾಗಾರದಲ್ಲಿ ತೀರ್ಮಾನಿಸಲಾಯಿತು.
ಕಾರ್ಯಾಗಾರದಲ್ಲಿ ಬಂದಿಮಟ್ಟಿ ಸ್ವಾಮೀಜಿ, ಕುಂಬಾರ ಗುಂಡಯ್ಯ ಸ್ವಾಮೀಜಿ, ಮಾಜಿ ಶಾಸಕ ಮಹಿಮ ಜೆ ಪಟೇಲ್, ಅಳಂದ ಶಾಸಕ ಬಿ.ಆರ್ ಪಾಟೀಲ್, ಹೊಸದುರ್ಗ ಶಾಸಕ ಗೋವಿಂದಪ್ಪ, ಮಾಜಿ ಸಭಾಪತಿ ಬಿ.ಎಲ್ ಶಂಕರ್, ಮಾಜಿ ಶಾಸಕರಾದ ಎ.ಟಿ ರಾಮಸ್ವಾಮಿ, ಮುಖ್ಯಮಂತ್ರಿ ಚಂದ್ರು, ವೈ.ಎಸ್.ವಿ ದತ್ತ, ಎಂಪಿ ನಾಡಗೌಡ, ಕೆ.ಆರ್.ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ, ಪಾಣಿ ಪಟೇಲ್, ತೇಜಸ್ವಿ ಪಟೇಲ್, ಬಿಜೆಪಿ ಮುಖಂಡರಾದ ಸಿಂಧೂರಮೇಶ್, ಬೈರೇಗೌಡ, ಅನೇಕ ರೈತ ಮುಖಂಡರು, ನಿವೃತ್ತ ನ್ಯಾಯಾಧೀಶರು, ವೈದ್ಯರು, ಶಿಕ್ಷಣ ತಜ್ಞರು, ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…