ಸಾಧನೆಯ ಹಾದಿಗೆ ಪರಿಶ್ರಮವೇ ಸ್ಫೂರ್ತಿ-ಜೆ.ರಾಜೇಂದ್ರ

ಸಾಧನೆಯ ಹಾದಿಯಲ್ಲಿ ಪರಿಶ್ರಮ ಸ್ಪೂರ್ತಿಯಾಗಬೇಕು. ಆಗ ಮಾತ್ರ ವಿದ್ಯಾರ್ಥಿಗಳು ಉನ್ನತ ಮಟ್ಟದ ಸಾಧನೆ ಮಾಡಲು ಸಾಧ್ಯ ಎಂದು ಶ್ರೀ ದೇವರಾಜ ಅರಸ್‌ ಎಜುಕೇಶನಲ್‌ ಟ್ರಸ್ಟ್‌ನ ಉಪಾಧ್ಯಕ್ಷ ಜೆ.ರಾಜೇಂದ್ರ ಹೇಳಿದರು.

ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ನೇತೃತ್ವದಲ್ಲಿ ಆರ್.ಎಲ್.ಜಾಲಪ್ಪ ಕಲಾ ಮಂದಿರದಲ್ಲಿ ಶನಿವಾರ ನಡೆದ ಆಗಮನ-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಮಗ್ರ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಜಾಲಪ್ಪ ವಿದ್ಯಾ ಸಂಸ್ಥೆಯಲ್ಲಿ ಹಲವು ಶೈಕ್ಷಣಿಕ ಘಟಕಗಳಿವೆ. ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಟ್ಟಾಗ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಪ್ರಾಂಶುಪಾಲ ಡಾ.ಆರ್.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ, ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ವಿಭಾಗ ಮುಖ್ಯಸ್ಥರಾದ ಪಿ.ಚೈತ್ರ, ಸಿ.ಪಿ.ಪ್ರಕಾಶ್, ಕೆ.ಸಿ.ಲಕ್ಷ್ಮೀಶ, ಬಾಬು ಸಾಬಿ, ಸಾಂಸ್ಕೃತಿಕ ಘಟಕದ ಸಂಚಾಲಕರಾದ ಭಾನುಶ್ರೀ ಮತ್ತಿತರರು ಉಪಸ್ಥಿತರಿದ್ದರು.

ಪ್ರಥಮ ವರ್ಷದ ಬಿಕಾಂ, ಬಿಬಿಎ, ಬಿಸಿಎ, ಬಿಎಸ್‌ಸಿ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡುವ ಮೂಲಕ ಸ್ವಾಗತಿಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

6 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

11 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

15 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago