Categories: ಲೇಖನ

ಸಾಧ್ಯವಾದಷ್ಟು ಪ್ರಾಮಾಣಿಕವಾಗಿರಿ…ಪ್ರಾಮಾಣಿಕರಾದರೆ ನೆಮ್ಮದಿಯ ನಾಳೆಗಳು ಸಾಧ್ಯ

82 ವರ್ಷಗಳ ಹಿಂದೆ……1942 – ಆಗಸ್ಟ್ 9,ಬ್ರಿಟೀಷರೇ ಭಾರತ ಬಿಟ್ಟು ತೊಲಗಿ…..ಕ್ವಿಟ್ ಇಂಡಿಯಾ……

2024 – ಆಗಸ್ಟ್ 9,
ಭ್ರಷ್ಟಾಚಾರಿಗಳೇ – ಜಾತಿವಾದಿಗಳೇ, ಧರ್ಮಾಂಧರೇ,
ಮತಾಂಧರೇ,
ಸಂವಿಧಾನ ವಿರೋಧಿಗಳೇ..‌

ನೀವು ಬದಲಾಗಿ – ಐಕ್ಯವಾಗಿ, ಇಲ್ಲವೇ ದೇಶ ಬಿಟ್ಟು ತೊಲಗಿ.
ದಯವಿಟ್ಟು ಯಾವುದೇ ಕಾರಣಕ್ಕೂ ನಮಗೆ ತೊಂದರೆ ಕೊಡಬೇಡಿ. ನಾವು ಸಾಮಾನ್ಯ ಜನ. ನೀವು ಬದುಕಿ ನಮ್ಮನ್ನು ಬದುಕಲು ಬಿಡಿ……

ಹಾಗಾದರೆ ಯಾರು ಬದಲಾಗಬೇಕು ಮತ್ತು ಹೇಗೆ ಬದಲಾಗಬೇಕು……

1) ಕೇಂದ್ರ ಮತ್ತು ರಾಜ್ಯದ ಸರ್ಕಾರಿ ಅಧಿಕಾರಿಗಳು ಮೊದಲು ಬದಲಾಗಬೇಕಿದೆ….

ಅದರಲ್ಲೂ ಮುಖ್ಯವಾಗಿ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯಗಳ ಲೋಕಸೇವಾ ಆಯೋಗದಿಂದ ಆಯ್ಕೆಯಾಗಿ ಉನ್ನತ ಅಧಿಕಾರದಲ್ಲಿರುವವರು, ಎಲ್ಲಾ ಗೆಜೆಟೆಡ್ ಶ್ರೇಣಿಯ ಅಧಿಕಾರಿಗಳು ಭ್ರಷ್ಟ ಮುಕ್ತರಾಗಿ ಸಂವಿಧಾನಾತ್ಮಕ ಅಧಿಕಾರ ಬಳಸಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಒಂದು ಕ್ರಾಂತಿಯೇ ಸಂಭವಿಸಬಹುದು. ಇದರಿಂದ ಸಹಜವಾಗಿಯೇ ಕೆಳಹಂತದ ಅಧಿಕಾರಿಗಳು ಬದಲಾಗುತ್ತಾರೆ. ಇಲ್ಲಿ ಪೋಲೀಸರು, ಶಿಕ್ಷಕರು, ಡಾಕ್ಟರುಗಳು, ನೋಂದಣಿ ಅಧಿಕಾರಿಗಳು ಹೆಚ್ಚು ಜವಾಬ್ದಾರಿ ತೆಗೆದುಕೊಳ್ಳಬೇಕು…..

2) ಜನ ಪ್ರತಿನಿಧಿಗಳು.

ಇಲ್ಲಿಯೂ ಮುಖ್ಯವಾಗಿ ಮಂತ್ರಿಗಳು, ಶಾಸಕರು ಮತ್ತು ಸಂಸತ್ತಿನ ಸದಸ್ಯರು ಬದಲಾಗಬೇಕು. ಸಂಖ್ಯೆಗಳ ಆಧಾರದಲ್ಲಿ ಇವರ ಸಂಖ್ಯೆ ಸುಮಾರು ‌5000 ಮಾತ್ರ ಇರಬಹುದು. ಇಷ್ಟು ಕಡಿಮೆ ಜನ ಆತ್ಮಾವಲೋಕನ ಮಾಡಿಕೊಂಡು ಬದಲಾದರೆ ಬಹುತೇಕ ವ್ಯವಸ್ಥೆ ಸರಿಯಾಗುತ್ತದೆ.

3) ಎಲ್ಲಾ ಧರ್ಮಗಳ ಮುಖ್ಯಸ್ಥರು.

ಇಲ್ಲಿಯೂ ಮುಖ್ಯವಾಗಿ ಮಂದಿರ, ಮಸೀದಿ, ಚರ್ಚುಗಳಲ್ಲಿ ಧರ್ಮ ಭೋದನೆ ಮಾಡುವವರು, ಧರ್ಮದ ಮೂಲಕವೇ ಸಂವಿಧಾನದ ಆಶಯಗಳನ್ನು ಭಕ್ತರಿಗೆ ಮನವರಿಕೆ ಮಾಡಿಕೊಟ್ಟರೆ ಬಹುದೊಡ್ಡ ಬದಲಾವಣೆ ಸಾಧ್ಯ. ಧರ್ಮದ ಮುಂದುವರೆದ ಮತ್ತು ಸುಧಾರಿತ ಅಂಶಗಳೇ ಸಂವಿಧಾನ ಎಂಬುದನ್ನು ಎಲ್ಲರೂ ಸ್ಪಷ್ಟವಾಗಿ ಹೇಳಬೇಕು.

4) ಎಲ್ಲಾ ರೀತಿಯ ಮಾಧ್ಯಮಗಳವರು.

ಕಾಲದಿಂದ ಕಾಲಕ್ಕೆ ಮಾಧ್ಯಮಗಳ ಸ್ವರೂಪ ಮತ್ತು ತಾಂತ್ರಿಕತೆಯಲ್ಲಿ ವ್ಯತ್ಯಾಸಗಳಾದರು ಇಂದಿಗೂ ಮಾಧ್ಯಮವೇ ಜನರ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆಯ ಬಹುದೊಡ್ಡ ವೇದಿಕೆ. ಬಹುತೇಕ ಜನರ ಅನೇಕ ವಿಷಯಗಳ ಅಭಿಪ್ರಾಯ ರೂಪಗೊಳ್ಳುವುದೇ ಮಾಧ್ಯಮಗಳ ಸುದ್ದಿಯ ಪ್ರಭಾವದಿಂದಾಗಿ. ಅವರುಗಳು ಎಲ್ಲಾ ಸ್ಪರ್ಧೆಗಳ ನಡುವೆಯೂ ಮೌಲ್ಯಯುತ ಮತ್ತು ವಿವೇಚನಾಯುಕ್ತ ಸುದ್ದಿಗಳನ್ನು ಪ್ರಸಾರ ಮಾಡಿದರೆ ಖಂಡಿತವಾಗಿ ಸಮಾಜ ಬದಲಾವಣೆಯ ಹಾದಿಗೆ ಮರಳುತ್ತದೆ.

5) ವಕೀಲರು ಮತ್ತು ನ್ಯಾಯಾಲಯಗಳು

ವೃತ್ತಿ ಧರ್ಮ ಮತ್ತು ಬದುಕಿನ ಅನಿವಾರ್ಯತೆಯ ಜೊತೆಗೆ ನೈತಿಕ ಮೌಲ್ಯಗಳನ್ನು ಕಾನೂನಿನ ಅರ್ಥೈಸುವಿಕೆಯಲ್ಲಿ ಅಳವಡಿಸಿಕೊಂಡು ಮತ್ತಷ್ಟು ಜವಾಬ್ದಾರಿಯುತವಾಗಿ ನಡೆದುಕೊಂಡರೆ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಕಾನೂನಿನ ಒಳಸುಳಿಗಳ ದುರುಪಯೋಗದಿಂದ ಸಮಾಜದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದೆ ಎಂಬುದು ವಾಸ್ತವ. ಅದರ ನಿಯಂತ್ರಣ ನ್ಯಾಯಾಂಗ ವ್ಯವಸ್ಥೆಯಿಂದ ಮಾತ್ರ ಸಾಧ್ಯ.

6) ಚುನಾವಣಾ ಆಯೋಗ, ಸಿಬಿಐ, ಇಡಿ ಮುಂತಾದ ಸ್ವತಂತ್ರ ಸಂಸ್ಥೆಗಳು

ಜನರ ತೆರಿಗೆ ಹಣದಿಂದಲೇ ಬದುಕುತ್ತಿರುವ ಈ ಇಲಾಖೆಗಳ ಅಧಿಕಾರಿಗಳು ದೇಶದ ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನಗಳನ್ನು ನೆನಪಿಸಿಕೊಂಡು ಯಾರಿಗೂ ಹೆದರದೆ ನ್ಯಾಯದ ಪರವಾಗಿ ಕೆಲಸ ಮಾಡಿದರೆ ವ್ಯವಸ್ಥೆಯ ಶಿಸ್ತು ಬದ್ಧ ಬದಲಾವಣೆಯ ಎಲ್ಲಾ ಸಾಧ್ಯತೆಗಳು ಇವೆ.

ಈ ರೀತಿಯ ಮುಖ್ಯ ಸ್ಥಾನದಲ್ಲಿ ಇರುವವರು ಪರಿವರ್ತನೆ ಹೊಂದಿದರೆ ಸಾಮಾನ್ಯ ಜನ ನಿಧಾನವಾಗಿ ಇವರನ್ನು ಅನುಸರಿಸುತ್ತಾರೆ.

ಇವರುಗಳು ‌ಈಗಾಗಲೇ ಆರ್ಥಿಕವಾಗಿ ಬಹುತೇಕ ಸದೃಢವಾಗಿರುವವರು. ಕೇವಲ ಮಾನಸಿಕವಾಗಿ ದೇಶ ‌ ಮತ್ತು ‌ದೇಶದ ಜನರ ಮೇಲೆ ಪ್ರೀತಿ ಅಭಿಮಾನ ಬೆಳೆಸಿಕೊಂಡು ತಮ್ಮ ಸಹಜ ಕರ್ತವ್ಯ ನಿರ್ವಹಿಸಿದರೆ ಸಾಕು. ಸುಧಾರಣೆ ಬಹುಬೇಗ ಸಾಧ್ಯವಾಗುತ್ತದೆ.

ಕ್ವಿಟ್ ಇಂಡಿಯಾ ಚಳವಳಿಯ 82 ನೆಯ ವರ್ಷದ ನೆನಪಿನ ಸಂದರ್ಭದಲ್ಲಿ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸೂಕ್ತ ಸಮಯ. ದಯವಿಟ್ಟು ಪ್ರತಿಯೊಬ್ಬರು ಕನಿಷ್ಠ ಸ್ವಲ್ಪಮಟ್ಟಿಗೆ ಇರುವುದರಲ್ಲಿ ಪ್ರಾಮಾಣಿಕರಾದರೆ ನೆಮ್ಮದಿಯ ನಾಳೆಗಳು ಸಾಧ್ಯ.
ಧನ್ಯವಾದಗಳು…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

8 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

10 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

13 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

15 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

15 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

22 hours ago