Categories: ಲೇಖನ

ಸಾಧ್ಯವಾದಷ್ಟು ಪ್ರಾಮಾಣಿಕವಾಗಿರಿ…ಪ್ರಾಮಾಣಿಕರಾದರೆ ನೆಮ್ಮದಿಯ ನಾಳೆಗಳು ಸಾಧ್ಯ

82 ವರ್ಷಗಳ ಹಿಂದೆ……1942 – ಆಗಸ್ಟ್ 9,ಬ್ರಿಟೀಷರೇ ಭಾರತ ಬಿಟ್ಟು ತೊಲಗಿ…..ಕ್ವಿಟ್ ಇಂಡಿಯಾ……

2024 – ಆಗಸ್ಟ್ 9,
ಭ್ರಷ್ಟಾಚಾರಿಗಳೇ – ಜಾತಿವಾದಿಗಳೇ, ಧರ್ಮಾಂಧರೇ,
ಮತಾಂಧರೇ,
ಸಂವಿಧಾನ ವಿರೋಧಿಗಳೇ..‌

ನೀವು ಬದಲಾಗಿ – ಐಕ್ಯವಾಗಿ, ಇಲ್ಲವೇ ದೇಶ ಬಿಟ್ಟು ತೊಲಗಿ.
ದಯವಿಟ್ಟು ಯಾವುದೇ ಕಾರಣಕ್ಕೂ ನಮಗೆ ತೊಂದರೆ ಕೊಡಬೇಡಿ. ನಾವು ಸಾಮಾನ್ಯ ಜನ. ನೀವು ಬದುಕಿ ನಮ್ಮನ್ನು ಬದುಕಲು ಬಿಡಿ……

ಹಾಗಾದರೆ ಯಾರು ಬದಲಾಗಬೇಕು ಮತ್ತು ಹೇಗೆ ಬದಲಾಗಬೇಕು……

1) ಕೇಂದ್ರ ಮತ್ತು ರಾಜ್ಯದ ಸರ್ಕಾರಿ ಅಧಿಕಾರಿಗಳು ಮೊದಲು ಬದಲಾಗಬೇಕಿದೆ….

ಅದರಲ್ಲೂ ಮುಖ್ಯವಾಗಿ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯಗಳ ಲೋಕಸೇವಾ ಆಯೋಗದಿಂದ ಆಯ್ಕೆಯಾಗಿ ಉನ್ನತ ಅಧಿಕಾರದಲ್ಲಿರುವವರು, ಎಲ್ಲಾ ಗೆಜೆಟೆಡ್ ಶ್ರೇಣಿಯ ಅಧಿಕಾರಿಗಳು ಭ್ರಷ್ಟ ಮುಕ್ತರಾಗಿ ಸಂವಿಧಾನಾತ್ಮಕ ಅಧಿಕಾರ ಬಳಸಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಒಂದು ಕ್ರಾಂತಿಯೇ ಸಂಭವಿಸಬಹುದು. ಇದರಿಂದ ಸಹಜವಾಗಿಯೇ ಕೆಳಹಂತದ ಅಧಿಕಾರಿಗಳು ಬದಲಾಗುತ್ತಾರೆ. ಇಲ್ಲಿ ಪೋಲೀಸರು, ಶಿಕ್ಷಕರು, ಡಾಕ್ಟರುಗಳು, ನೋಂದಣಿ ಅಧಿಕಾರಿಗಳು ಹೆಚ್ಚು ಜವಾಬ್ದಾರಿ ತೆಗೆದುಕೊಳ್ಳಬೇಕು…..

2) ಜನ ಪ್ರತಿನಿಧಿಗಳು.

ಇಲ್ಲಿಯೂ ಮುಖ್ಯವಾಗಿ ಮಂತ್ರಿಗಳು, ಶಾಸಕರು ಮತ್ತು ಸಂಸತ್ತಿನ ಸದಸ್ಯರು ಬದಲಾಗಬೇಕು. ಸಂಖ್ಯೆಗಳ ಆಧಾರದಲ್ಲಿ ಇವರ ಸಂಖ್ಯೆ ಸುಮಾರು ‌5000 ಮಾತ್ರ ಇರಬಹುದು. ಇಷ್ಟು ಕಡಿಮೆ ಜನ ಆತ್ಮಾವಲೋಕನ ಮಾಡಿಕೊಂಡು ಬದಲಾದರೆ ಬಹುತೇಕ ವ್ಯವಸ್ಥೆ ಸರಿಯಾಗುತ್ತದೆ.

3) ಎಲ್ಲಾ ಧರ್ಮಗಳ ಮುಖ್ಯಸ್ಥರು.

ಇಲ್ಲಿಯೂ ಮುಖ್ಯವಾಗಿ ಮಂದಿರ, ಮಸೀದಿ, ಚರ್ಚುಗಳಲ್ಲಿ ಧರ್ಮ ಭೋದನೆ ಮಾಡುವವರು, ಧರ್ಮದ ಮೂಲಕವೇ ಸಂವಿಧಾನದ ಆಶಯಗಳನ್ನು ಭಕ್ತರಿಗೆ ಮನವರಿಕೆ ಮಾಡಿಕೊಟ್ಟರೆ ಬಹುದೊಡ್ಡ ಬದಲಾವಣೆ ಸಾಧ್ಯ. ಧರ್ಮದ ಮುಂದುವರೆದ ಮತ್ತು ಸುಧಾರಿತ ಅಂಶಗಳೇ ಸಂವಿಧಾನ ಎಂಬುದನ್ನು ಎಲ್ಲರೂ ಸ್ಪಷ್ಟವಾಗಿ ಹೇಳಬೇಕು.

4) ಎಲ್ಲಾ ರೀತಿಯ ಮಾಧ್ಯಮಗಳವರು.

ಕಾಲದಿಂದ ಕಾಲಕ್ಕೆ ಮಾಧ್ಯಮಗಳ ಸ್ವರೂಪ ಮತ್ತು ತಾಂತ್ರಿಕತೆಯಲ್ಲಿ ವ್ಯತ್ಯಾಸಗಳಾದರು ಇಂದಿಗೂ ಮಾಧ್ಯಮವೇ ಜನರ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆಯ ಬಹುದೊಡ್ಡ ವೇದಿಕೆ. ಬಹುತೇಕ ಜನರ ಅನೇಕ ವಿಷಯಗಳ ಅಭಿಪ್ರಾಯ ರೂಪಗೊಳ್ಳುವುದೇ ಮಾಧ್ಯಮಗಳ ಸುದ್ದಿಯ ಪ್ರಭಾವದಿಂದಾಗಿ. ಅವರುಗಳು ಎಲ್ಲಾ ಸ್ಪರ್ಧೆಗಳ ನಡುವೆಯೂ ಮೌಲ್ಯಯುತ ಮತ್ತು ವಿವೇಚನಾಯುಕ್ತ ಸುದ್ದಿಗಳನ್ನು ಪ್ರಸಾರ ಮಾಡಿದರೆ ಖಂಡಿತವಾಗಿ ಸಮಾಜ ಬದಲಾವಣೆಯ ಹಾದಿಗೆ ಮರಳುತ್ತದೆ.

5) ವಕೀಲರು ಮತ್ತು ನ್ಯಾಯಾಲಯಗಳು

ವೃತ್ತಿ ಧರ್ಮ ಮತ್ತು ಬದುಕಿನ ಅನಿವಾರ್ಯತೆಯ ಜೊತೆಗೆ ನೈತಿಕ ಮೌಲ್ಯಗಳನ್ನು ಕಾನೂನಿನ ಅರ್ಥೈಸುವಿಕೆಯಲ್ಲಿ ಅಳವಡಿಸಿಕೊಂಡು ಮತ್ತಷ್ಟು ಜವಾಬ್ದಾರಿಯುತವಾಗಿ ನಡೆದುಕೊಂಡರೆ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಕಾನೂನಿನ ಒಳಸುಳಿಗಳ ದುರುಪಯೋಗದಿಂದ ಸಮಾಜದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದೆ ಎಂಬುದು ವಾಸ್ತವ. ಅದರ ನಿಯಂತ್ರಣ ನ್ಯಾಯಾಂಗ ವ್ಯವಸ್ಥೆಯಿಂದ ಮಾತ್ರ ಸಾಧ್ಯ.

6) ಚುನಾವಣಾ ಆಯೋಗ, ಸಿಬಿಐ, ಇಡಿ ಮುಂತಾದ ಸ್ವತಂತ್ರ ಸಂಸ್ಥೆಗಳು

ಜನರ ತೆರಿಗೆ ಹಣದಿಂದಲೇ ಬದುಕುತ್ತಿರುವ ಈ ಇಲಾಖೆಗಳ ಅಧಿಕಾರಿಗಳು ದೇಶದ ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನಗಳನ್ನು ನೆನಪಿಸಿಕೊಂಡು ಯಾರಿಗೂ ಹೆದರದೆ ನ್ಯಾಯದ ಪರವಾಗಿ ಕೆಲಸ ಮಾಡಿದರೆ ವ್ಯವಸ್ಥೆಯ ಶಿಸ್ತು ಬದ್ಧ ಬದಲಾವಣೆಯ ಎಲ್ಲಾ ಸಾಧ್ಯತೆಗಳು ಇವೆ.

ಈ ರೀತಿಯ ಮುಖ್ಯ ಸ್ಥಾನದಲ್ಲಿ ಇರುವವರು ಪರಿವರ್ತನೆ ಹೊಂದಿದರೆ ಸಾಮಾನ್ಯ ಜನ ನಿಧಾನವಾಗಿ ಇವರನ್ನು ಅನುಸರಿಸುತ್ತಾರೆ.

ಇವರುಗಳು ‌ಈಗಾಗಲೇ ಆರ್ಥಿಕವಾಗಿ ಬಹುತೇಕ ಸದೃಢವಾಗಿರುವವರು. ಕೇವಲ ಮಾನಸಿಕವಾಗಿ ದೇಶ ‌ ಮತ್ತು ‌ದೇಶದ ಜನರ ಮೇಲೆ ಪ್ರೀತಿ ಅಭಿಮಾನ ಬೆಳೆಸಿಕೊಂಡು ತಮ್ಮ ಸಹಜ ಕರ್ತವ್ಯ ನಿರ್ವಹಿಸಿದರೆ ಸಾಕು. ಸುಧಾರಣೆ ಬಹುಬೇಗ ಸಾಧ್ಯವಾಗುತ್ತದೆ.

ಕ್ವಿಟ್ ಇಂಡಿಯಾ ಚಳವಳಿಯ 82 ನೆಯ ವರ್ಷದ ನೆನಪಿನ ಸಂದರ್ಭದಲ್ಲಿ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸೂಕ್ತ ಸಮಯ. ದಯವಿಟ್ಟು ಪ್ರತಿಯೊಬ್ಬರು ಕನಿಷ್ಠ ಸ್ವಲ್ಪಮಟ್ಟಿಗೆ ಇರುವುದರಲ್ಲಿ ಪ್ರಾಮಾಣಿಕರಾದರೆ ನೆಮ್ಮದಿಯ ನಾಳೆಗಳು ಸಾಧ್ಯ.
ಧನ್ಯವಾದಗಳು…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಹೆದ್ದಾರಿಯಿಂದ ನಗರ ಬೀದಿವರೆಗೆ ಶುಭಾಶಯ, ಸ್ವಾಗತ ಬ್ಯಾನರ್‌ಗಳದ್ದೇ ಆರ್ಭಟ: ನ್ಯಾಯಾಲಯದ ನಿರ್ದೇಶನಕ್ಕೂ ಸೊಪ್ಪು ಹಾಕದ ಅನಧಿಕೃತ ಫ್ಲೆಕ್ಸ್‌ಗಳು: ಸ್ವಚ್ಛತೆ, ಸುರಕ್ಷತೆ ಹಾಗೂ ಪರಿಸರಕ್ಕೆ ದೊಡ್ಡ ಸವಾಲು

ಬೆಂಗಳೂರು ಗ್ರಾಮಾಂತರ: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ ಹಾಗೂ ಬಿಲ್‌ಬೋರ್ಡ್‌ಗಳನ್ನು ಅಳವಡಿಸದಂತೆ ರಾಜ್ಯ ಸರ್ಕಾರ ಮತ್ತು ನ್ಯಾಯಾಲಯಗಳು…

17 hours ago

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

1 day ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

2 days ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

2 days ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

2 days ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

2 days ago