ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಈ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
2013 – 18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ ಎಂದು ತಿಳಿಸಿದರು.
ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದರು.
ಕಾಂತರಾಜು ಅವರ ಅಧ್ಯಕ್ಷಾವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಿದರು.
ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…